ಹಾಸನ ಪ್ರಕರಣದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಪಕ್ಷದ ತಕರಾರು ಇಲ್ಲ. ಆದರೆ, ಕಾಂಗ್ರೆಸ್ ಭವನದ ಬಳಿ ಭಾನುವಾರ ಪ್ರತಿಭಟನೆ ನಡೆಸುವಾಗ ಕೀಳು ಭಾಷೆ ಬಳಸಿದ್ದಾರೆ. ಚಾರಿತ್ರ್ಯಹರಣ ಮಾಡುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಮಾಜಿ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ನೇತೃತ್ವದ ನಿಯೋಗ ಸೋಮವಾರ ದೂರು ನೀಡಿದೆ.