ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ ವಿಧಾನಸಭೆ ಕ್ಷೇತ್ರ: ಶರತ್ ಬಚ್ಚೇಗೌಡ ಇಂದು ನಾಮಪತ್ರ ಸಲ್ಲಿಕೆ

Last Updated 17 ಏಪ್ರಿಲ್ 2023, 5:55 IST
ಅಕ್ಷರ ಗಾತ್ರ

ಹೊಸಕೋಟೆ: ಶಾಸಕ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಚೇರಿ ಎದುರು ಸೋಮವಾರ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದರು.

ಕಲಾ ತಂಡಗಳ ಮೆರುಗು ಕಾರ್ಯಕರ್ತರಲ್ಲಿ ಹುರುಪು ಹೆಚ್ಚಿಸಿದೆ. ಶಾಸಕ ಶರತ್ ಅವರನ್ನು ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಮೆರವಣಿಗೆ ನಡೆಸಿದರು. ಬೆಳಿಗ್ಗೆ 11.30ಕ್ಕೆ ತಾಲ್ಲೂಕಿನ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಹೋಗಿ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ
ಶರತ್‌ ಅವರು ಇಂದು ನಾಮಪತ್ರ ಸಲ್ಲಿಸಲಿಸುವುದಕ್ಕೂ ಮುನ್ನ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿರುವ ಅವರ ಮನೆ ದೇವರು ಚನ್ನಕೇಶವ ದೇಗುಲದಲ್ಲಿ ಪತ್ನಿ ಪ್ರತಿಭಾ ಜತೆ ವಿಶೆಷ ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT