<p><strong>ತುಮಕೂರು: ‘</strong>ಯಾರು ಏನೇ ತೊಂದರೆ ಕೊಟ್ಟರೂ, ತಲೆ ಮೇಲೆ ಕಲ್ಲು ಎತ್ತಿ ಹಾಕಿದರೂ ಹೆದರಿ ರಾಜಕೀಯದಿಂದ ಓಡಿ ಹೋಗುವುದಿಲ್ಲ. ಹೆಚ್ಚಿನ ಭದ್ರತೆಯ ಅಗತ್ಯವೂ ಇಲ್ಲ. ಒಂದೆರಡು ದಿನಗಳಲ್ಲಿ ಮತ್ತೆ ಪ್ರಚಾರಕ್ಕೆ ಹೋಗುತ್ತೇನೆ’ ಎಂದು ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ ಹೇಳಿದರು.</p>.<p>‘ಕೊರಟಗೆರೆ ಕ್ಷೇತ್ರದ ಬೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಹೂವಿನ ಜತೆ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಹಾಕಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯ. ದುಷ್ಕರ್ಮಿಗಳ ಉದ್ದೇಶ ಗೊತ್ತಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒತ್ತಾಯಿಸಿದ್ದೇನೆ’ ಎಂದು ತಿಳಿಸಿದರು. </p>.<p>‘ಪರಮೇಶ್ವರ ನಾಟಕ ಮಾಡುತ್ತಿದ್ದಾರೆ’ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಶನಿವಾರ ಗೊಲ್ಲಹಳ್ಳಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಅವರಿಗೆ ನಾಟಕ ಮಾಡಿ ಅಭ್ಯಾಸವಿದೆ. ಅವರಂತೆ ಕಣ್ಣಲ್ಲಿ ನೀರು ಹಾಕಿ, ಅತ್ತು, ಕರೆಯುವುದಿಲ್ಲ’ ಎಂದು ತಿರುಗೇಟು ನೀಡಿದರು.</p>.<p>‘ಏಟು ತಿಂದವನು ನಾನು. ಅದರ ನೋವೆಷ್ಟಿದೆ ಎಂಬುದು ನನಗೆ ಗೊತ್ತು. ನಾಟಕ ಮಾಡುವ ಅಗತ್ಯವಿಲ್ಲ. ಜನರ ಮುಂದೆ ಹೋಗುತ್ತೇನೆ. ಮತದಾರರೇ ತೀರ್ಪು ಕೊಡುತ್ತಾರೆ’ ಎಂದು ಹೇಳಿದರು.</p>.<p>‘ನನ್ನ ಮೇಲೆ ಹಲ್ಲೆಗೆ ಯತ್ನಿಸಿರುವುದು ಇದೇ ಮೊದಲಲ್ಲ. 1999ರಲ್ಲಿ ವಿಜಯೋತ್ಸವ ಸಮಯದಲ್ಲಿ ಚಾಕುವಿನಿಂದ ತಿವಿಯಲು ಯತ್ನಿಸಲಾಗಿತ್ತು. ಈ ಬಾರಿ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ ನಡೆದಿದೆ. ನನ್ನನ್ನೇ ಗುರಿ ಮಾಡಿಕೊಂಡು ಪದೇಪದೇ ಇಂತಹ ದಾಳಿ ನಡೆಯುತ್ತಿವೆ. ದ್ವೇಷ ತೀರಿಸಲು ಸಾರ್ವಜನಿಕ ಜೀವನ ಬಳಸಿಕೊಳ್ಳಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: ‘</strong>ಯಾರು ಏನೇ ತೊಂದರೆ ಕೊಟ್ಟರೂ, ತಲೆ ಮೇಲೆ ಕಲ್ಲು ಎತ್ತಿ ಹಾಕಿದರೂ ಹೆದರಿ ರಾಜಕೀಯದಿಂದ ಓಡಿ ಹೋಗುವುದಿಲ್ಲ. ಹೆಚ್ಚಿನ ಭದ್ರತೆಯ ಅಗತ್ಯವೂ ಇಲ್ಲ. ಒಂದೆರಡು ದಿನಗಳಲ್ಲಿ ಮತ್ತೆ ಪ್ರಚಾರಕ್ಕೆ ಹೋಗುತ್ತೇನೆ’ ಎಂದು ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ ಹೇಳಿದರು.</p>.<p>‘ಕೊರಟಗೆರೆ ಕ್ಷೇತ್ರದ ಬೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಹೂವಿನ ಜತೆ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಹಾಕಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯ. ದುಷ್ಕರ್ಮಿಗಳ ಉದ್ದೇಶ ಗೊತ್ತಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒತ್ತಾಯಿಸಿದ್ದೇನೆ’ ಎಂದು ತಿಳಿಸಿದರು. </p>.<p>‘ಪರಮೇಶ್ವರ ನಾಟಕ ಮಾಡುತ್ತಿದ್ದಾರೆ’ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಶನಿವಾರ ಗೊಲ್ಲಹಳ್ಳಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಅವರಿಗೆ ನಾಟಕ ಮಾಡಿ ಅಭ್ಯಾಸವಿದೆ. ಅವರಂತೆ ಕಣ್ಣಲ್ಲಿ ನೀರು ಹಾಕಿ, ಅತ್ತು, ಕರೆಯುವುದಿಲ್ಲ’ ಎಂದು ತಿರುಗೇಟು ನೀಡಿದರು.</p>.<p>‘ಏಟು ತಿಂದವನು ನಾನು. ಅದರ ನೋವೆಷ್ಟಿದೆ ಎಂಬುದು ನನಗೆ ಗೊತ್ತು. ನಾಟಕ ಮಾಡುವ ಅಗತ್ಯವಿಲ್ಲ. ಜನರ ಮುಂದೆ ಹೋಗುತ್ತೇನೆ. ಮತದಾರರೇ ತೀರ್ಪು ಕೊಡುತ್ತಾರೆ’ ಎಂದು ಹೇಳಿದರು.</p>.<p>‘ನನ್ನ ಮೇಲೆ ಹಲ್ಲೆಗೆ ಯತ್ನಿಸಿರುವುದು ಇದೇ ಮೊದಲಲ್ಲ. 1999ರಲ್ಲಿ ವಿಜಯೋತ್ಸವ ಸಮಯದಲ್ಲಿ ಚಾಕುವಿನಿಂದ ತಿವಿಯಲು ಯತ್ನಿಸಲಾಗಿತ್ತು. ಈ ಬಾರಿ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ ನಡೆದಿದೆ. ನನ್ನನ್ನೇ ಗುರಿ ಮಾಡಿಕೊಂಡು ಪದೇಪದೇ ಇಂತಹ ದಾಳಿ ನಡೆಯುತ್ತಿವೆ. ದ್ವೇಷ ತೀರಿಸಲು ಸಾರ್ವಜನಿಕ ಜೀವನ ಬಳಸಿಕೊಳ್ಳಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>