ಹುಬ್ಬಳ್ಳಿ: ವರಿಷ್ಠರು ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮೂಲಕ ಹೊಸ ಸಂದೇಶ ಕಳಿಸಿದ್ದಾರೆ. ಅವರ ಜತೆ ಚರ್ಚಿಸಿದ ನಂತರ ಇಂದು ರಾತ್ರಿಯೇ ನನ್ನ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.