ನೆಹರು ಕುಟುಂಬದ ಆಸ್ತಿ ಮಾತ್ರ ಹೆಚ್ಚಳ
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್ ಸೇರಿದಂತೆ ಅನೇಕ ವೀರರು ಪ್ರಾಣ ಕಳೆದುಕೊಂಡಿದ್ದಾರೆ. ಅವರಿಗೆ ಸ್ವಾತಂತ್ರ್ಯದ ಲಾಭ ದೊರೆಯಲಿಲ್ಲ. ಕೇವಲ ನೆಹರೂ, ಗಾಂಧಿ ಕುಟುಂಬಕ್ಕೆ ಮಾತ್ರ ಲಾಭ ಸಿಕ್ಕಿದೆ. ಬಡತನ ನಿರ್ಮೂಲನೆ ಮಾಡುತ್ತೇವೆ ಅಂತ ಇಂದಿರಾ ಗಾಂಧಿ ಹೇಳಿದರು. ಆದರೆ, ಅವರ ಕುಟುಂಬದ ಆಸ್ತಿ ಮಾತ್ರ ಹೆಚ್ಚಳ ಮಾಡಿಕೊಂಡರು. ಅಂಬಾನಿ, ಅದಾನಿಯವರ ಆಸ್ತಿ ಹೆಚ್ಚಳವಾಗುವಂತೆ ಮಾಡಿದವರು ಕಾಂಗ್ರೆಸ್ನವರು ಎಂದು ವಾಗ್ದಾಳಿ ನಡೆಸಿದರು.
‘ವರದಿ’ ರಾಜಕಾರಣಕ್ಕೆ ಬಳಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಆಯೋಗದ ವರದಿ ಇಟ್ಟುಕೊಂಡು ಚುನಾವಣಾ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಇರುವ ವರದಿಯನ್ನೇ ಬಿಡುಗಡೆ ಮಾಡಿಸಲಾಗದ ರಾಹುಲ್ ಗಾಂಧಿ, ದೇಶದಾದ್ಯಂತ ಹಿಂದುಳಿದ ವರ್ಗಗಳ ಸಮೀಕ್ಷೆ ಮಾಡುವುದಾಗಿ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಬೊಮ್ಮಾಯಿ ಜರಿದರು.
ಸಿಎಂ ಹೇಳಿಕೆಗೆ ತಿರುಗೇಟು
‘ಪ್ರಲ್ಹಾದ ಜೋಶಿ ಮತ್ತು ಬಸವರಾಜ ಬೊಮ್ಮಾಯಿಗೆ ಮತ ಕೇಳುವ ನೈತಿಕತೆ ಇಲ್ಲ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ, ‘ಕಳೆದ ಹತ್ತು ವರ್ಷಗಳಲ್ಲಿ ಎನ್ಡಿಎ ಸರ್ಕಾರ ಮೂರು ಪಟ್ಟು ಹೆಚ್ಚು ಬರ ಪರಿಹಾರ ನೀಡಿದೆ. ಆ ನೈತಿಕತೆ ಮೇಲೆ ಮತ ಕೇಳುತ್ತಿದ್ದೇವೆ. ರಾಜ್ಯ ಸರ್ಕಾರ ಸಮಯಕ್ಕೆ ಸರಿಯಾಗಿ ಕೇಂದ್ರಕ್ಕೆ ಬರ ಪರಿಹಾರ ವರದಿ ಕಳಿಸಿಲ್ಲ. ಅವರಿಗೆ ನೈತಿಕತೆ ಇಲ್ಲ. ಉಗುರಿನಲ್ಲಿ ತೆಗೆಯುವುದಕ್ಕೆ, ಕೊಡಲಿ ತೆಗೆದುಕೊಂಡು ನಿಂತಿದ್ದಾರೆ. ನಮ್ಮ ಕಾಲದಲ್ಲಿ ಪ್ರವಾಹ ಬಂದಾಗ ನಾವು ಕೇಂದ್ರವನ್ನು ನೋಡದೇ ಪರಿಹಾರ ನೀಡಿದ್ದೇವೆ’ ಎಂದು ತಿರುಗೇಟು ನೀಡಿದರು.