ಹುಟ್ಟೂರು ದೊಡ್ಡ ಆಲಹಳ್ಳಿ, ಶಿವನಹಳ್ಳಿ, ಸಾತನೂರು ವೃತ್ತದಲ್ಲಿ ಮಿಂಚಿನ ಪ್ರಚಾರ ನಡೆಸಿದರು. ಹೋದಲ್ಲೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಣ್ಣು ಹಾಗೂ ಹೂವಿನಿಂದ ತಯಾರಿಸಿದ ಬೃಹತ್ ಹೂವಿನಹಾರ ಹಾಕಿ ಸ್ವಾಗತ ನೀಡಿದರು. ಸಹೋದರನ ಅಭಿವೃದ್ಧಿ ಕಾರ್ಯ ಬಣ್ಣಿಸುತ್ತಲೇ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು.