ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯನಗರ ವಿಧಾನಸಭಾ ಕ್ಷೇತ್ರ: 16 ಮತದಿಂದ ಬಿಜೆಪಿಗೆ ಜಯ

Published 14 ಮೇ 2023, 1:51 IST
Last Updated 14 ಮೇ 2023, 1:51 IST
ಅಕ್ಷರ ಗಾತ್ರ

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ಹಲವು ಅಡೆತಡೆಗಳನ್ನು ಮೀರಿ ತಡರಾತ್ರಿ ಪ್ರಕಟಗೊಂಡಿತು. ಬಿಜೆಪಿಯ ಸಿ.ಕೆ. ರಾಮಮೂರ್ತಿ ಅವರು ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ವಿರುದ್ಧ 16 ಮತಗಳಿಂದ ವಿಜಯ ಸಾಧಿಸಿದರು.

ಮರು ಎಣಿಕೆ ಪ್ರಕ್ರಿಯೆಯಲ್ಲಾದ ಗೊಂದಲದಿಂದ ತಡರಾತ್ರಿಯವರೆಗೂ ಫಲಿತಾಂಶ ಘೋಷಣೆಯಾಗಿರಲಿಲ್ಲ. ಮೂರು ಬಾರಿ ಮತ ಎಣಿಕೆ ಮಾಡಲಾಯಿತು. ಅಧಿಕಾರಿಗಳ ಈ ಮರು ಎಣಿಕೆಯನ್ನು ಕಾಂಗ್ರೆಸ್ ಮುಖಂಡರು ಒಪ್ಪದೇ ಗೊಂದಲ ಸೃಷ್ಟಿಯಾಗಿತ್ತು.

ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳು ಮತ್ತು ನಾಯಕರು ತಮ್ಮದೇ ವಾದ ಮಂಡಿಸಿ ಅವರಂತೆಯೇ ಫಲಿತಾಂಶ ಘೋಷಣೆಯಾಗಬೇಕೆಂದು ಒತ್ತಾಯಿಸಿದರು.

ಜಯನಗರ ಮತ ಎಣಿಕೆ ಕೇಂದ್ರಕ್ಕೆ ಬಂದ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅವರು ಮತ ಎಣಿಕೆ ಕೇಂದ್ರದಲ್ಲಿ ಅಧಿಕಾರಿಗಳು ಮರು ಎಣಿಕೆ ಸಂದರ್ಭದಲ್ಲಿ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ನಂತರ ಬಿಜೆಪಿ ಗೆಲುವನ್ನು ನಿರ್ಧರಿಸಲಾಯಿತು. ಸಿ.ಕೆ. ರಾಮಮೂರ್ತಿ ಅವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT