ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡೆಗಣಿಸಿದರೂ ಮೈತ್ರಿ ಧರ್ಮ ಪಾಲಿಸುತ್ತೇವೆ: JDSನ ಮಂಜುನಾಥ ಗೌಡಶಿವಣ್ಣನವರ

Published 17 ಏಪ್ರಿಲ್ 2024, 13:12 IST
Last Updated 17 ಏಪ್ರಿಲ್ 2024, 13:12 IST
ಅಕ್ಷರ ಗಾತ್ರ

ಹಾವೇರಿ: ‘ಚುನಾವಣಾ ಪ್ರಚಾರ ಸಭೆಗೆ ನಮ್ಮನ್ನು ಕರೆಯದೇ ಬಿಜೆಪಿಯವರು ಕಡೆಗಣಿಸುತ್ತಿದ್ದಾರೆ. ಆದರೂ, ಎಚ್‌.ಡಿ. ಕುಮಾರಸ್ವಾಮಿಯವರ ಆದೇಶದಂತೆ ಮೈತ್ರಿ ಧರ್ಮ ಪಾಲಿಸುತ್ತೇವೆ. ಬಸವರಾಜ ಬೊಮ್ಮಾಯಿಯವರ ಗೆಲುವಿಗೆ ಶ್ರಮಿಸುತ್ತೇವೆ’ ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಹಾವೇರಿಯಲ್ಲಿ ಈಚೆಗೆ ನಡೆದ ಬಿಜೆಪಿ ಯುವ ಸಮಾವೇಶಕ್ಕೂ ನಮ್ಮನ್ನು ಕಾಟಾಚಾರಕ್ಕೆ ಕರೆಯಲಾಯಿತು. ಈ ಸಮಾವೇಶಕ್ಕೆ ಬಂದಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನಮ್ಮ ಕೆಲವು ಮುಖಂಡರು ಪತ್ರ ನೀಡಿ, ಜೆಡಿಎಸ್‌ ಕಾರ್ಯಕರ್ತರಿಗೆ ಸರಿಯಾದ ಗೌರವ ಸಿಗುತ್ತಿಲ್ಲ ಎಂದು ಗಮನಕ್ಕೆ ತಂದಿದ್ದೆವು. ಆದರೂ ಇಲ್ಲಿಯವರೆಗೆ ಸರಿಪಡಿಸುವ ಕಾರ್ಯವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ‌

‘ಏ.19ರಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಬೃಹತ್‌ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮಕ್ಕೂ ಮುನ್ನ ಜಂಟಿ ಪತ್ರಿಕಾಗೋಷ್ಠಿ ನಡೆಸೋಣ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪೂಜಾರ ಅವರಿಗೆ ತಿಳಿಸಿದ್ದೆ. ಬೊಮ್ಮಾಯಿಯವರನ್ನು ಕೇಳಿ ಹೇಳುತ್ತೇನೆ ಎಂದವರು, ನಮ್ಮನ್ನು ಕರೆಯದೇ ಪ್ರತ್ಯೇಕವಾಗಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ರಾಣೆಬೆನ್ನೂರಿನಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಗೂ ನಮ್ಮನ್ನು ಕರೆದಿಲ್ಲ’ ಎಂದು ದೂರಿದರು.

‘ಮೈತ್ರಿ ಧರ್ಮ ಪಾಲಿಸುವುದು ನಮ್ಮ ಕರ್ತವ್ಯ. ಹೀಗಾಗಿ ಮೈತ್ರಿಕೂಟದ ಅಭ್ಯರ್ಥಿಯಾದ ಬೊಮ್ಮಾಯಿಯವರನ್ನು ನಾವು ಬೆಂಬಲಿಸುತ್ತೇವೆ. ನಾಮಪತ್ರ ಮೆರವಣಿಗೆಯಲ್ಲಿ ನಮ್ಮ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದೇವೆ’ ಎಂದು ಮಂಜುನಾಥ ಗೌಡಶಿವಣ್ಣನವರ ತಿಳಿಸಿದರು.

ಜಿಲ್ಲಾ ಘಟಕದ ಉಪಾಧ್ಯಕ್ಷ ಸತೀಶ ಮಾಳದಕರ್‌, ಮೂಕಪ್ಪ ಪಡಿಯಪ್ಪನವರ, ಕತ್ತಲ್‌ಸಾಬ್‌ ಬಣಗಾರ, ಸಿದ್ದಪ್ಪ ಗುಡಿಮುಂದರ್, ರಾಮನಗೌಡ ಪಾಟೀಲ, ಮಲ್ಲಿಕಾರ್ಜುನ ಅರಳಿ, ಚಂದ್ರಗೌಡ ಭರಮಗೌಡ, ಎಂ.ಎಸ್. ಹಣಗಿ, ಅಲ್ತಾಫ್ ನದಾಫ್, ಮಂಜುನಾಥ ಕನ್ನನಾಯಕನವರ, ರಮೇಶ ಮಾಕನೂರ, ರೀಟಾ ನಾಯ್ಕರ್, ನಾಗರಾಜ ಪಾಟೀಲ, ಲಲಿತಾ ಉಜ್ಜನಗೌಡರ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT