ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗಳು ರಾಜನಂದಿನಿ ನಡೆ ಎದೆಗೆ ಚೂರಿ ಹಾಕಿದಂತಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

Last Updated 12 ಏಪ್ರಿಲ್ 2023, 11:08 IST
ಅಕ್ಷರ ಗಾತ್ರ

ಶಿವಮೊಗ್ಗ: ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗ ವಿಷಯ ಗೊತ್ತಾಯಿತು. ಅವಳು (ರಾಜ ನಂದಿನಿ) ಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ಯೋಚಿಸಿರಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ತಂತ್ರ ಇರಬಹುದು ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆ ಸಂತೋಷ, ನೆಮ್ಮದಿ ನನಗೆ ಇದೆ. ಏನೇ ಆಗಲಿ ನಾನು ಕಾಂಗ್ರೆಸ್ ಬಿಟ್ಡು ಹೋಗಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT