ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಸದಸ್ಯ ಆಯನೂರು ಮಂಜುನಾಥ್ ರಾಜೀನಾಮೆ

Last Updated 19 ಏಪ್ರಿಲ್ 2023, 14:26 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬಿಜೆಪಿ ಮುಖಂಡ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಿವಮೊಗ್ಗದ ಆಯನೂರು ಮಂಜುನಾಥ್ ಅವರು, ಬುಧವಾರ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.

ನಗರದ ದೇಸಾಯಿ ವೃತ್ತದ ಬಳಿ‌‌ ಇರುವ ಹೊರಟ್ಟಿ ಅವರ ನಿವಾಸಕ್ಕೆ ಸಂಜೆ ಬೆಂಬಲಿಗರೊಂದಿಗೆ ಬಂದ ಮಂಜುನಾಥ್ ಅವರು, ಸ್ಥಳದಲ್ಲೇ ರಾಜೀನಾಮೆ ಪತ್ರ ಬರೆದು ಕೊಟ್ಟರು. ನಂತರ "ಯಾವ ಒತ್ತಡಕ್ಕೂ ಒಳಗಾಗದೆ ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದೇನೆ" ಎಂದು ಹೇಳಿದರು.

"ನಿಮಯಾನುಸಾರವಾಗಿ ನಿಮ್ಮ‌ ರಾಜೀನಾಮೆ ಅಂಗೀಕರಿಸಿದ್ದೇನೆ" ಎಂದು ಹೊರಟ್ಟಿ ರಾಜೀನಾಮೆ ಪತ್ರವನ್ನು ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT