ಹುಬ್ಬಳ್ಳಿ: ಸದ್ಯ ರಾಜಕೀಯ ವ್ಯವಸ್ಥೆ ನೋಡಿದರೆ ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದ ಪರಿಸ್ಥಿತಿ ಎದುರಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.
ನಗರದ ಲ್ಯಾಮಿಂಗ್ಟನ್ ಶಾಲೆಯ ಮತಗಟ್ಟೆಯಲ್ಲಿ ಬುಧವಾರ ಕುಟುಂಬ ಸಮೇತ ಭೇಟಿ, ಮತ ಚಲಾಯಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.