ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹ್ಯಾರಡ ಗ್ರಾಮದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಕೃಷ್ಣನಾಯ್ಕ ಪರ ಮತಯಾಚಿಸಿ ಮಾತನಾಡಿದ ಅವರು, ‘ಗೋವುಗಳ ಬಗ್ಗೆ ಪೂಜ್ಯನೀಯ ಭಾವನೆ ಇರುವ ಕಾರಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದ್ದೇವೆ. ಆದರೆ ಕಾಂಗ್ರೆಸ್ಸಿಗರು ಗೋಹತ್ಯೆಯ ಪರವಾಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸುವುದಾಗಿ ಬಾಯಿ ಬಿಟ್ಟು ಹೇಳುವವರು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿ ಮತ ಕೇಳಿದ್ದರೆ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರು ಚುನಾವಣೆಯಲ್ಲಿ ಗೆಲ್ಲಲು ಆಗುತ್ತಿರಲಿಲ್ಲ’ ಎಂದು ಹೇಳಿದರು.