ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಿಗೆರೆ: ಶಾಸಕ ಕುಮಾರಸ್ವಾಮಿಗೆ ಕೈತಪ್ಪಿದ ಟಿಕೆಟ್, ದೀಪಕ್ ದೊಡ್ಡಯ್ಯಗೆ ಟಿಕೆಟ್

Last Updated 12 ಏಪ್ರಿಲ್ 2023, 19:22 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಬಿಜೆಪಿ ಎರಡನೇ ಪಟ್ಟಿ ಪ್ರಕಟಿಸಿದ್ದು, ಮೂಡಿಗೆರೆ ಮೀಸಲು ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೈತಪ್ಪಿದೆ. ಬಿಜೆಪಿ ಜಿಲ್ಲಾ ವಕ್ತಾರ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ಒಲಿದಿದೆ.

ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಬಾರದು ಎಂದು ಒಂದು ಗುಂಪು ಪಕ್ಷದ ನಾಯಕರಿಗೆ ಒತ್ತಡ ಮಾಡಿತ್ತು. ಮತ್ತೊಂದು ಗುಂಪು ಕುಮಾರಸ್ವಾಮಿ ಅವರಿಗೇ ಟಿಕೆಟ್ ನೀಡಬೇಕು ಎಂದು ಒತ್ತಡ ಹೇರಿದ್ದರು.

ಜಿಲ್ಲೆಯ ಕೆಲ ಮುಖಂಡರು ಕುಮಾರಸ್ವಾಮಿಗೆ ಟಿಕೆಟ್ ತಪ್ಪಿಸಲು ಬಹಳ ದಿನಗಳ ಹಿಂದೆಯೇ ತಂತ್ರ ಹೆಣೆದಿದ್ದರು ಪಕ್ಷದ ಮುಖಂಡರೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.

ಈ ಕ್ಷೇತ್ರದ ಟಿಕೆಟ್ ಗಾಗಿ ಎಂಟಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದರು. ಹಲವು ತಿಂಗಳಿನಿಂದ ತೀವ್ರ ಕಸರತ್ತು ನಡೆಸಿದ್ದ ದೀಪಕ್ ದೊಡ್ಡಯ್ಯ ಅವರು ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT