ಕಾಂಗ್ರೆಸ್ಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿರುವುದು ಶುಭ ಸೂಚನೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ಸೂಚನೆ ಇರುವುದರಿಂದ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಇತರೆ ಪಕ್ಷಗಳ ಮುಖಂಡರು ನನ್ನ ಸಂಪರ್ಕದಲ್ಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಅನ್ನು ಮುಳುಗುವ ಹಡಗು ಎಂದು ಹೇಳಿದ್ದಾರೆ. ಯಾರು ಮುಳುಗುತ್ತಾರೆ ಎಂಬುದು ಮೇ.13 ರಂದು ಗೊತ್ತಾಗಲಿದೆ ಎಂದರು.