ಈ ಬಾರಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಬಾರಿ ಅಂತರದಿಂದ ಗೆಲುವು ಸಾಧಿಸಲಿದ್ದೇನೆ. 13 ಕ್ಷೇತ್ರಗಳಲ್ಲಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದ್ದು, ಉಳಿದ ಕ್ಷೇತ್ರದಲ್ಲಿ ಪೈಪೋಟಿ ಇದೆ ಎಂದರು.
ಬಳ್ಳಾರಿ ನಗರದಲ್ಲಿ ಕೆಆರ್ಪಿಪಿ ಅಭ್ಯರ್ಥಿ ಅರುಣಾ ಲಕ್ಷ್ಮಿ ಸಹ ಗೆಲುವು ಸಾಧಿಸಲಿದ್ದಾರೆ. ಗಂಗಾವತಿ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಯಾರು ಎಂಬ ಮಾಧ್ಯಮದವರ ಪ್ರಶ್ನೆಗೆ ಯಾರೂ ಸ್ಪರ್ಧಿಯಲ್ಲ ಎಂದರು.
ಫಲಿತಾಂಶದ ನಂತರ ಕೆಆರ್ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬೇಕಾದ ಅವಶ್ಯಕತೆ ಇದ್ದು, ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷವಾದರೂ ನಮ್ಮ ಪಕ್ಷದ ಪ್ರಣಾಳಿಕೆ ಈಡೇರಿಸುವವರಿಗೆ ಬೆಂಬಲ ನೀಡುತ್ತೇನೆ ಎಂದರು.