ವರುಣ ಕ್ಷೇತ್ರದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಸತತ 2ನೇ ದಿನವಾದ ಶುಕ್ರವಾರ ವರುಣ ಹೋಬಳಿ ಹಾಗು ತಿ.ನರಸೀಪುರ ತಾಲ್ಲೂಕಿನ ಹಳ್ಳಿಗಳಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಅವರಿಗೆ ಖ್ಯಾತ ಚಲನಚಿತ್ರ ನಟರಾದ ದುನಿಯಾ ವಿಜಿ, ಲೂಸ್ ಮಾದ ಯೋಗಿ ಹಾಗೂ ನಟಿ ನಿಶ್ವಿಕಾ ನಾಯ್ಡು, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಪಕ್ಷದ ಮುಖಂಡರು ಸಾಥ್ ನೀಡಿದರು.