ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿ 2013ರಲ್ಲಿ ಜೆಡಿಎಸ್ ಪಕ್ಷದಿಂದ ಬಿ– ಫಾರಂ ಪಡೆದು ನಾಮಪತ್ರ ಸಲ್ಲಿಸಿದ್ದರೂ, ಬೇರೆ ಅಭ್ಯರ್ಥಿಗೆ ಸಿ–ಫಾರಂ ಕೊಟ್ಟಿದ್ದರಿಂದ ಟಿಕೆಟ್ ಕಳೆದುಕೊಂಡರು. ನಂತರ ಕಾಂಗ್ರೆಸ್ ಸೇರಿ ತುಮಕೂರು ಸಂಸದರಾಗಿ ಆಯ್ಕೆ ಆಗಿದ್ದರು. ಎರಡನೇ ಬಾರಿಗೆ ಸ್ಪರ್ಧಿಸಲು ಸಿದ್ಧರಾಗಿದ್ದಾಗ, ಜೆಡಿಎಸ್ ಜತೆಗಿನ ಹೊಂದಾಣಿಕೆಯಿಂದಾಗಿ ಮತ್ತೆ ಸ್ಪರ್ಧಿಸುವ ಅವಕಾಶದಿಂದ ವಂಚಿತರಾದರು.