ಪಟ್ಟಣದ ಗಾಳಿ ಮರೆಮ್ಮ ದೇವಸ್ಥಾನದಿಂದ ತೆರದ ವಾಹನದಲ್ಲಿ ಸಾವಿರಾರು ಕಾರ್ಯಕರ್ತರು, ಚಾಂಜ್ ಮೇಳ, ಕರಡಿ ಕುಣಿತ, ಮಜಲು ಸೇರಿದಂತೆ ಇನ್ನಿತರ ಕಲಾತಂಡಗಳೊಂದಿಗೆ ಕಾಳಿದಾಸ ನಗರ, ಮಾರುಕಟ್ಟೆ ಮಾರ್ಗವಾಗಿ ತಹಶಿಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಧಾರವಾಡ ಜಿಲ್ಲಾ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಷಣ್ಮುಖ ಗುರಿಕಾರ ಸೇರಿದಂತೆ ಸ್ಥಳೀಯ ಮುಖಂಡರು ಸಾಥ್ ನೀಡಿದರು.