<p><strong>ಬೆಂಗಳೂರು</strong>: ಕರ್ನಾಟಕ ವಿಧಾನಸಭೆ ಚುನಾವಣೆ–2023ಕ್ಕೆ ಇಂದಿನಿಂದ (ಏಪ್ರಿಲ್ 13) ಅಧಿಕೃತ ಚುನಾವಣಾ ಪ್ರಕ್ರಿಯೆಗಳು ಪ್ರಾರಂಭವಾಗಲಿವೆ.</p>.<p>ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು ಒಟ್ಟು ಏಳು ದಿನ ಅವಕಾಶ ಇರುತ್ತದೆ. ಏ.20 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.</p>.<p>ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕಡೆಯ ದಿನವಾಗಿದೆ.</p>.<p>ಮೇ 10 ರಂದು ಬುಧವಾರ ಒಂದೇ ಹಂತದಲ್ಲಿ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.</p>.<p>ರಾಜ್ಯದಲ್ಲಿ ಒಟ್ಟು 5.24 ಕೋಟಿ ಮತದಾರರಿದ್ದು ಇದರಲ್ಲಿ ಪುರುಷರು 2.63 ಕೋಟಿ ಹಾಗೂ ಮಹಿಳೆಯರು 2.60 ಕೋಟಿ ಇದ್ದಾರೆ.</p>.<p>ಈಗಾಗಲೇ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ 166 ಹಾಗೂ ಜೆಡಿಎಸ್ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.</p>.<p><a href="https://www.prajavani.net/lakshman-savadi-announces-his-decision-to-quit-bjp-karnataka-assembly-election-1030974.html" itemprop="url">ಬಿಜೆಪಿ ತೊರೆಯುವ ನಿರ್ಧಾರ ತಿಳಿಸಿದ ಲಕ್ಷ್ಮಣ ಸವದಿ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ವಿಧಾನಸಭೆ ಚುನಾವಣೆ–2023ಕ್ಕೆ ಇಂದಿನಿಂದ (ಏಪ್ರಿಲ್ 13) ಅಧಿಕೃತ ಚುನಾವಣಾ ಪ್ರಕ್ರಿಯೆಗಳು ಪ್ರಾರಂಭವಾಗಲಿವೆ.</p>.<p>ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು ಒಟ್ಟು ಏಳು ದಿನ ಅವಕಾಶ ಇರುತ್ತದೆ. ಏ.20 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.</p>.<p>ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕಡೆಯ ದಿನವಾಗಿದೆ.</p>.<p>ಮೇ 10 ರಂದು ಬುಧವಾರ ಒಂದೇ ಹಂತದಲ್ಲಿ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.</p>.<p>ರಾಜ್ಯದಲ್ಲಿ ಒಟ್ಟು 5.24 ಕೋಟಿ ಮತದಾರರಿದ್ದು ಇದರಲ್ಲಿ ಪುರುಷರು 2.63 ಕೋಟಿ ಹಾಗೂ ಮಹಿಳೆಯರು 2.60 ಕೋಟಿ ಇದ್ದಾರೆ.</p>.<p>ಈಗಾಗಲೇ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ 166 ಹಾಗೂ ಜೆಡಿಎಸ್ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.</p>.<p><a href="https://www.prajavani.net/lakshman-savadi-announces-his-decision-to-quit-bjp-karnataka-assembly-election-1030974.html" itemprop="url">ಬಿಜೆಪಿ ತೊರೆಯುವ ನಿರ್ಧಾರ ತಿಳಿಸಿದ ಲಕ್ಷ್ಮಣ ಸವದಿ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>