ನಿರೀಕ್ಷೆಯಂತೆ ಕೆ.ಆರ್.ಪೇಟೆ ಕ್ಷೇತ್ರದಿಂದ ಸಚಿವ ಕೆ.ಸಿ.ನಾರಾಯಣಗೌಡ ಕಣಕ್ಕಿಳಿಯುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದ ಅಶೋಕ್ ಜಯರಾಂ ಅವರಿಗೆ ಟಕೆಟ್ ಘೋಷಣೆ ಮಾಡಲಾಗಿದೆ. ಮೇಲುಕೋಟೆ ಕ್ಷೇತ್ರದಿಂದ ಡಾ.ಇಂದ್ರೇಶ್, ಶ್ರೀರಂಗಪಟ್ಟಣ ಕ್ಷೇತ್ರದಿಂದ ಎಸ್.ಸಚ್ಚಿದಾನಂದ, ಮದ್ದೂರು ಕ್ಷೇತ್ರದಿಂದ ಎಸ್.ಪಿ.ಸ್ವಾಮಿ, ಮಳವಳ್ಳಿ ಕ್ಷೇತ್ರದಿಂದ ಮುನಿರಾಜು ಅವರ ಹೆಸರು ಘೋಷಣೆ ಮಾಡಲಾಗಿದೆ.