ಶಿರಸಿ: ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆ ಚುನಾವಣೆಯಯ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಎದುರು ಸೋಲು ಅನುಭವಿಸಿದ್ದಾರೆ.
ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ 10 ಸುತ್ತಿನಲ್ಲಿ ಹಿನ್ನಡೆ ಕಂಡಿತ್ತು. ಮತ್ತೆ ಚೇತರಿಕೆ ಕಂಡ ಬಿಜೆಪಿ 16ನೇ ಸುತ್ತಿನ ಎಣಿಕೆಯಲ್ಲಿ ಕೂಡ ಮುನ್ನಡೆ ಸಾಧಿಸಿತ್ತು.
ಕೊನೆಯವರೆಗೂ ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್ ಕೊನೆಯ 2 ಸುತ್ತುಗಳಲ್ಲಿ ಮುನ್ನಡೆ ಸಾಧಿಸಿತು. ಅಂತಿಮವಾಗಿ 5800 ಮತಗಳ ಅಂತರದಿಂದ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಅವರು ಗೆಲುವಿನ ನಗೆ ಬೀರಿದರು