ಮುಸ್ಲಿಂ, ಲಿಂಗಾಯತ ಹಾಗೂ ದಲಿತ ಮತದಾರರು ಹೆಚ್ಚಾಗಿರುವ ಕ್ಷೇತ್ರದಲ್ಲಿ ಸತತ ಎರಡನೇ ಸಲ ಹೊಸ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿತ್ತು. ಜೆಡಿಎಸ್, ಎಐಎಂಐಎಂ ಹಾಗೂ ಎಸ್ಡಿಪಿಐ ಅಭ್ಯರ್ಥಿಗಳು ಕಾಂಗ್ರೆಸ್ ಮತಬುಟ್ಟಿಗೆ ಕೈ ಹಾಕುವುದರಿಂದ ಆಗುವ ಮತ ವಿಭಜನೆಯು ತನ್ನ ಗೆಲುವಿಗೆ ಕಾರಣವಾಗಲಿದೆ ಎಂಬ ಬಿಜೆಪಿ ಲೆಕ್ಕಾಚಾರ ತಲೆ ಕೆಳಗಾಗಿದೆ.