ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ವಿ. ಚಂದ್ರಶೇಖರ್ ನಾಮಪತ್ರ ಸಲ್ಲಿಸಲು ನಡೆದ ಮೆರವಣಿಗೆಗೂ ಮೊದಲು ಇಲ್ಲಿನ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಆಶೀರ್ವಾದ ಪಡೆಯುವಾಗ ಭಾವುಕರಾಗಿ ಕಣ್ಣೀರಿಟ್ಟರು.
ಸ್ವಾಮೀಜಿ ಪಾದಕ್ಕೆ ನಮಸ್ಕರಿಸುತ್ತಿದ್ದಂತೆ ಒತ್ತರಿಸಿ ಬಂದ ದುಖಃವನ್ನು ತಡೆದುಕೊಳ್ಳಲಾಗದೆ ಕಣ್ಣೀರು ಹಾಕಿದರು. ಆಗ ಅವರ ಕುಟುಂಬದವರು ಮತ್ತು ಬೀಗರಾದ ಜೆಡಿಎಸ್ ಮುಖಂಡ ಸುರೇಶ ಭೂಮರಡ್ಡಿ ಸಂತೈಸಿದರು.