ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುತಂತ್ರದ ಮಾಹಿತಿ ಹಿನ್ನೆಲೆಯಲ್ಲಿ ನಾಮಪತ್ರ: ಡಿ.ಕೆ. ಸುರೇಶ್ ಸ್ಪಷ್ಟನೆ

Last Updated 20 ಏಪ್ರಿಲ್ 2023, 10:12 IST
ಅಕ್ಷರ ಗಾತ್ರ

ರಾಮನಗರ: ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಸರ್ಕಾರ ಕುತಂತ್ರ ನಡೆಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಾನು ಸಹ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಕನಕಪುರದಲ್ಲಿ ಗುರುವಾರ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಕ್ರಮಬದ್ಧವಾಗಿದೆ. ಆದರೆ ಕುತಂತ್ರ ನಡೆಸಿ ಅವರ ನಾಮಪತ್ರ ತಿರಸ್ಕೃತ ಆಗಲೂ ಬಹುದು. ಆ ಮಾಹಿತಿ ಇರುವ ಕಾರಣ ನಾನು ಸಹ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದರು.

ಚುನಾವಣಾ ಆಯೋಗದ ಅಧಿಕಾರಿಗಳೂ ಸಹ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ‌. ಅವರು ಸರ್ಕಾರದ ಸೂಚನೆಯಂತೆ ಏನು ಬೇಕಾದರೂ ಮಾಡಬಹುದು. ಹೀಗಾಗಿ ನಾವು ಸಹ ಎಚ್ಚರಿಕೆ ಇಟ್ಟಿದ್ದೇವೆ. ಮುಂದಿನ ಬೆಳವಣಿಗೆಗಳನ್ನು ನೀವೇ ಕಾದು ನೋಡಿ ಎಂದರು.

ಪದ್ಮನಾಭ ನಗರದಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT