ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರದಲ್ಲಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Last Updated 20 ಏಪ್ರಿಲ್ 2023, 9:47 IST
ಅಕ್ಷರ ಗಾತ್ರ

ರಾಮನಗರ: ಅಚ್ಚರಿಯ ಬೆಳವಣಿಗೆಯಲ್ಲಿ ಸಂಸದ ಡಿ.ಕೆ. ಸುರೇಶ್ ಕನಕಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಬೆಳಿಗ್ಗೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಸುರೇಶ್ ಪಾಲ್ಗೊಂಡಿದ್ದರು. ಈ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ್ದ ಸುರೇಶ್, ಮಧ್ಯಾಹ್ನದವರೆಗೆ ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದಿದ್ದರು. ಅದರ ಬೆನ್ನಲ್ಲೇ ಸುರೇಶ್ ಏಕಾಏಕಿ ಕನಕಪುರದಲ್ಲಿ ನಾಮಪತ್ರ ಸಲ್ಲಿಸಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆಯೇ ಅಥವಾ ಪಕ್ಷೇತರರಾಗಿಯೇ ಎಂಬುದು ಇನ್ನೂ ಖಾತ್ರಿಯಾಗಿಲ್ಲ.

ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT