<p><strong>ಚಿತ್ರದುರ್ಗ:</strong> 'ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾಗಿ ಉಳಿದಿಲ್ಲ, ಅವರೊಬ್ಬ ಪ್ರಚಾರ ಮಂತ್ರಿ' ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದರು.</p>.<p>‘ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಮಂತ್ರಿ ಮಂಡಲ ಚುನಾವಣೆ ನಡೆಯುವ ರಾಜ್ಯದಲ್ಲಿ ಬೀಡುಬಿಡುತ್ತದೆ. ಕೆಲಸ ಮಾಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗುತ್ತದೆ. ಕರ್ನಾಟಕದ ಜನರು ಇದನ್ನು ಗಮನಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಪ್ರಚಾರದ ಅಬ್ಬರ ಇನ್ನೂ ಜೋರಾಗಿತ್ತು’ ಎಂದು ಹೇಳಿದರು.</p>.<div><blockquote>ದೇಶದಲ್ಲಿ ಬಿಜೆಪಿ ನಾಯಕರಿಗೆ ಭಾರಿ ಭದ್ರತೆ ಸಿಗುತ್ತಿದೆ. ಉಳಿದ ಪಕ್ಷದ ನಾಯಕರನ್ನು ಕಡೆಗಣಿಸಲಾಗುತ್ತಿದೆ. ಭದ್ರತೆ ವಿಚಾರದಲ್ಲಿನ ಈ ತಾರತಮ್ಯ ಸರಿಯಲ್ಲ.</blockquote><span class="attribution">ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಅಧ್ಯಕ್ಷ</span></div>.<p>‘ಉಗ್ರರ ಸರಣಿ ದಾಳಿಗೆ ಕಾಶ್ಮೀರ ತತ್ತರಿಸಿದೆ. ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಛತೀಸ್ಗಡದಲ್ಲಿ ನಕ್ಸಲರು ಅಟ್ಟಹಾಸ ಮೆರೆಯುತ್ತಿದ್ದಾರೆ. ದೇಶದ ಎಲ್ಲೆಡೆ ಆತಂದ ವಾತಾವರಣ ಸೃಷ್ಟಿಯಾಗಿದೆ. ದೇಶ ಸುರಕ್ಷಿತವಾಗಿಲ್ಲ ಎಂಬುದಕ್ಕೆ ಇವು ನಿದರ್ಶನಗಳಾಗಿವೆ. ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದಾರೆ’ ಎಂದು ಕುಟುಕಿದರು.</p>.<p>‘ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಕರ್ನಾಟಕದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆದಿದೆ. ಅಧಿಕಾರಿಗಳ ವರ್ಗಾವಣೆ, ಅಭಿವೃದ್ಧಿ ಕಾಮಗಾರಿ, ಉದ್ಯೋಗ ನೀಡುವಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಈ ಗಂಭೀರ ಸ್ವರೂಪದ ಆರೋಪಕ್ಕೆ ಬಿಜೆಪಿ ಉತ್ತರಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> 'ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾಗಿ ಉಳಿದಿಲ್ಲ, ಅವರೊಬ್ಬ ಪ್ರಚಾರ ಮಂತ್ರಿ' ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದರು.</p>.<p>‘ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಮಂತ್ರಿ ಮಂಡಲ ಚುನಾವಣೆ ನಡೆಯುವ ರಾಜ್ಯದಲ್ಲಿ ಬೀಡುಬಿಡುತ್ತದೆ. ಕೆಲಸ ಮಾಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗುತ್ತದೆ. ಕರ್ನಾಟಕದ ಜನರು ಇದನ್ನು ಗಮನಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಪ್ರಚಾರದ ಅಬ್ಬರ ಇನ್ನೂ ಜೋರಾಗಿತ್ತು’ ಎಂದು ಹೇಳಿದರು.</p>.<div><blockquote>ದೇಶದಲ್ಲಿ ಬಿಜೆಪಿ ನಾಯಕರಿಗೆ ಭಾರಿ ಭದ್ರತೆ ಸಿಗುತ್ತಿದೆ. ಉಳಿದ ಪಕ್ಷದ ನಾಯಕರನ್ನು ಕಡೆಗಣಿಸಲಾಗುತ್ತಿದೆ. ಭದ್ರತೆ ವಿಚಾರದಲ್ಲಿನ ಈ ತಾರತಮ್ಯ ಸರಿಯಲ್ಲ.</blockquote><span class="attribution">ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಅಧ್ಯಕ್ಷ</span></div>.<p>‘ಉಗ್ರರ ಸರಣಿ ದಾಳಿಗೆ ಕಾಶ್ಮೀರ ತತ್ತರಿಸಿದೆ. ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಛತೀಸ್ಗಡದಲ್ಲಿ ನಕ್ಸಲರು ಅಟ್ಟಹಾಸ ಮೆರೆಯುತ್ತಿದ್ದಾರೆ. ದೇಶದ ಎಲ್ಲೆಡೆ ಆತಂದ ವಾತಾವರಣ ಸೃಷ್ಟಿಯಾಗಿದೆ. ದೇಶ ಸುರಕ್ಷಿತವಾಗಿಲ್ಲ ಎಂಬುದಕ್ಕೆ ಇವು ನಿದರ್ಶನಗಳಾಗಿವೆ. ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದಾರೆ’ ಎಂದು ಕುಟುಕಿದರು.</p>.<p>‘ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಕರ್ನಾಟಕದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆದಿದೆ. ಅಧಿಕಾರಿಗಳ ವರ್ಗಾವಣೆ, ಅಭಿವೃದ್ಧಿ ಕಾಮಗಾರಿ, ಉದ್ಯೋಗ ನೀಡುವಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಈ ಗಂಭೀರ ಸ್ವರೂಪದ ಆರೋಪಕ್ಕೆ ಬಿಜೆಪಿ ಉತ್ತರಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>