ತನ್ನ ಬದಲು ಮಗನಿಗೆ ಟಿಕೆಟ್ ನೀಡಬೇಕೆಂದು ಆನಂದ್ ಸಿಂಗ್ ಕೋರಿದ್ದರು. ಅದಕ್ಕೆ ಪಕ್ಷ ಮನ್ನಣೆ ನೀಡಿದೆ. ಪಕ್ಷದ ಹಿರಿಯ ನಾಯಕಿ ರಾಣಿ ಸಂಯುಕ್ತಾ ಅವರು ಟಿಕೆಟ್ಗಾಗಿ ತೀವ್ರ ಕಸರತ್ತು ನಡೆಸಿದ್ದರು. ಆದರೆ, ಪಕ್ಷ ಅವರಿಗೆ ಮಣೆ ಹಾಕಿಲ್ಲ. ಇನ್ನೂ ಇತ್ತೀಚೆಗೆ ಕಾಂಗ್ರೆಸ್ನಿಂದ ಪಕ್ಷ ಸೇರ್ಪಡೆಯಾಗಿರುವ ಕೃಷ್ಣ ನಾಯ್ಕ ಹಾಗೂ ಲೋಕೇಶ್ ನಾಯಕ ಅವರಿಗೆ ಟಿಕೆಟ್ ನೀಡಲಾಗಿದ್ದು, ಮೂಲ ಬಿಜೆಪಿಯವರು ಕೆರಳುವಂತೆ ಮಾಡಿದೆ.