ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಯೊಬ್ಬರ ಮತವೂ ಪರಿಣಾಮಕಾರಿ : ಡಾ.ತೋಂಟದ ಸಿದ್ದರಾಮ‌ ಸ್ವಾಮೀಜಿ

Published 10 ಮೇ 2023, 6:57 IST
Last Updated 10 ಮೇ 2023, 6:57 IST
ಅಕ್ಷರ ಗಾತ್ರ

ಬೆಳಗಾವಿ: ‘ಮತ ಪ್ರತಿಯೊಬ್ಬರ ಹಕ್ಕು. ಸಮಾಜಕ್ಕಾಗಿ ದುಡಿಯುವ ವ್ಯಕ್ತಿಗಳನ್ನು ವಿಧಾನಸಭೆಗೆ ಕಳುಹಿಸಿ ಕೊಡುವಲ್ಲಿ ಪ್ರತಿಯೊಬ್ಬರ ಮತಗಳು ಪರಿಣಾಮ ಬೀರುತ್ತವೆ. ಚಲಾವಣೆಗೆ ನಿರುತ್ಸಾಹ ತೋರದೆ ಮತ ಚಲಾಯಿಸಿ ಸಂವಿಧಾನದ ಆಶಯಗಳನ್ನು ಉಳಿಸಬೇಕು' ಎಂದು ಗದಗ- ಡಂಬಳ ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ದರಾಮ‌ ಸ್ವಾಮೀಜಿ ಹೇಳಿದರು.

ಬೆಳಗಾವಿಯ ಶಿವಬಸವ ನಗರದ ಮತಗಟ್ಟೆಯಲ್ಲಿ ಬುಧವಾರ ಮತದಾನ ಮಾಡಿ‌ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಮತದಾನ ಮಹತ್ವನ್ನು ತಿಳಿಸಿದರು.

ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ಕಾರಂಜಿಮಠದ ಡಾ.ಶಿವಯೋಗಿ ಸ್ವಾಮೀಜಿ, ವಿಜಯಪುರದ ಸಿದ್ದಾರೂಢ ಸ್ವಾಮೀಜಿ, ಶೇಗುಣಸಿಯ ಮಹಾಂತ ಸ್ವಾಮೀಜಿ ಅವರು ಇಲ್ಲಿನ ಶಿವಬಸವ ನಗರ ಮತ್ತು ಮಾರುತಿ ಗಲ್ಲಿಯ ಮತಗಟ್ಟೆಗಳಲ್ಲಿ ಮತ ಚಲಾಯಿಸಿ ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT