ಚಿತ್ತಾಪುರ ತಾಲ್ಲೂಕಿನ ಕಲಗುರ್ತಿ ಗ್ರಾಮದಲ್ಲಿ ಶನಿವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕ್ ಅವರು, ‘ನಮ್ಮ ತಾಯಿ, ಹೆಂಡತಿ, ಮಕ್ಕಳು ಏನು ತಪ್ಪು ಮಾಡಿದ್ದಾರೆ? 50 ವರ್ಷ ರಾಜಕೀಯ ಜೀವನದಲ್ಲಿ ಖರ್ಗೆ ಅವರು ಯಾವಾಗಲು ದುಡಿದದ್ದು ಕಲಬುರಗಿಯ ಜನರಿಗಾಗಿ. ಅಂತಹವರನ್ನು ಸಾಯಿಸುವ ಹೇಳಿಕೆ ಕೊಡುತ್ತಿದ್ದಾರೆ’ ಎಂದು ಕಿಡಿಕಾರಿದರು.