ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: ಎನ್.ಮಹೇಶ್‌ಗೆ ಹೀನಾಯ ಸೋಲು, ಕೃಷ್ಣಮೂರ್ತಿಗೆ ಗೆಲುವಿನ ಮಾಲೆ

Published 13 ಮೇ 2023, 8:40 IST
Last Updated 13 ಮೇ 2023, 8:40 IST
ಅಕ್ಷರ ಗಾತ್ರ

ಚಾಮರಾಜನಗರ: ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಆರ್.ಕೃಷ್ಣಮೂರ್ತಿ ಅವರು ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಎನ್.ಮಹೇಶ್ ಹೀನಾಯ ಸೋಲು ಅನುಭವಿಸಿದ್ದಾರೆ.

18ನೇ ಸುತ್ತಿನೊಂದಿಗೆ, ಮತಗಳ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕೃಷ್ಣಮೂರ್ತಿ 1,07,380 ಮತಗಳನ್ನು ಪಡೆದಿದ್ದಾರೆ.

ಬಿಜೆಪಿಯ ಎನ್.ಮಹೇಶ್ 48,403 ಮತಗಳನ್ನು ಗಳಿಸಿದ್ದಾರೆ.

ಅಂಚೆ ಮತಗಳ ವಿವರ ಇನ್ನಷ್ಟೇ ಸಿಗಬೇಕಿದ್ದು, 58 ಸಾವಿರಕ್ಕೂ ಹೆಚ್ಚು ಮತಗಳಿಂದ ಕೃಷ್ಣಮೂರ್ತಿ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್ ನ ಬಿ.ಪುಟ್ಟಸ್ವಾಮಿ ಅವರು 3,855 ಮತಗಳನ್ನು ಪಡೆಯಲಷ್ಟೇ ಶಕ್ತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT