‘ಕಾಶ್ಮೀರಕ್ಕೆ 10 ವರ್ಷ ದೇಶದ ಯಾವ ಪ್ರಧಾನಿಯೂ ಹೋಗಿರಲಿಲ್ಲ. ಹೋದರೆ ಹೊಡೆದು ಹಾಕುತ್ತಾರೆ ಎನ್ನುವ ಭಯ ಇತ್ತು. ಆದರೆ, ನಾನು ಪ್ರಧಾನಿಯಾದ ನಂತರ, ಸತ್ತರೆ ನನ್ನನ್ನು ಹೊಳೆನರಸೀಪುರದಲ್ಲಿ ಮಣ್ಣು ಮಾಡುವಂತೆ ಹೇಳಿ ಹೋಗಿದ್ದೆ. ನಾಲ್ಕು ಬಾರಿ ಕಾಶ್ಮೀರಕ್ಕೆ ಹೋಗಿ ಶಾಂತಿ ತಂದೆ. ಮುಸ್ಲಿಮರಿಗೆ ಮೀಸಲಾತಿ ನೀಡಿದ್ದು ನಾವು. ಮುಸ್ಲಿಮರು ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದರು.