ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | 10 ಕ್ಷೇತ್ರಗಳಲ್ಲಿ ಗೆಲುವು ನಿಶ್ಚಿತ: ಸತೀಶ ಜಾರಕಿಹೊಳಿ

Last Updated 2 ಏಪ್ರಿಲ್ 2023, 10:16 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ. ಈ ಪೈಕಿ 10 ಕ್ಷೇತ್ರಗಳಲ್ಲಿ ನಿಶ್ಚಿತವಾಗಿ ಗೆಲ್ಲುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಟಿಕೆಟ್‌ ವಿಚಾರವಾಗಿ ಮೂರು ಕ್ಷೇತ್ರಗಳಲ್ಲಿ ಗೊಂದಲವಿದೆ. ಸಂಧಾನ ಸಭೆ ಮೂಲಕ ಅತೃಪ್ತರ ಮನವೊಲಿಸಿ, ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಮೊದಲ ಹಂತದಲ್ಲಿ ಹಾಲಿ ಮತ್ತು ಮಾಜಿ ಶಾಸಕರಿಗೆ ಟಿಕೆಟ್‌ ಕೊಟ್ಟಿದ್ದೇವೆ. ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಏಪ್ರಿಲ್‌ 10ರೊಳಗೆ ಬಿಡುಗಡೆಗೊಳಿಸುತ್ತೇವೆ’ ಎಂದರು.

‘ಬಂಡಾಯದಿಂದಾಗಿ ಕಳೆದ ಬಾರಿ ಚುನಾವಣೆಯಲ್ಲಿ ಸವದತ್ತಿ ಯಲ್ಲಮ್ಮ ಮತ್ತು ರಾಯಬಾಗ ಕ್ಷೇತ್ರ ಕಳೆದುಕೊಂಡಿದ್ದೆವು. ಈ ಬಾರಿ ಆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸುವ ಜವಾಬ್ದಾರಿಯನ್ನು ಹೈಕಮಾಂಡ್ ‌ಕೊಟ್ಟಿದೆ. ಅಥಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸಮರ್ಥರಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ನಮ್ಮ ಪಕ್ಷಕ್ಕೆ ಬರುವ ಮಾಹಿತಿಯಿಲ್ಲ. ರಾಮದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಬಂಡಾಯ ಅಭ್ಯರ್ಥಿಯೂ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್‌ ನೀಡುತ್ತೇವೆ. ಹೊರಗಿನಿಂದ ಬರುವ ಅಭ್ಯರ್ಥಿಗೆ ಮಣೆ ಹಾಕುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಸದಸ್ಯ ಸುನೀಲ ಹನುಮಣ್ಣವರ, ರಾಜೇಂದ್ರ ಪಾಟೀಲ, ಲಕ್ಷ್ಮಣ‌‌ರಾವ್‌ ಚಿಂಗಳೆ ಇತರರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT