ಈ ಸಲವೂ ಸಂಸದ ಸಂಗಣ್ಣ ಕರಡಿ ಮತ್ತು ಚಂದ್ರಶೇಖರ್ ನಡುವೆ ಟಿಕೆಟ್ಗಾಗಿ ಪೈಪೋಟಿ ನಡೆದಿತ್ತು. ಭಾನುವಾರ ಒಂದೆಡೆ ಸಂಗಣ್ಣ ಸ್ವಾಭಿಮಾನಿ ಕಾರ್ಯಕರ್ತರ ಸಭೆ ನಡೆಸಿದರೆ, ಇನ್ನೊಂದೆಡೆ ಚಂದ್ರಶೇಖರ್ ಪಕ್ಷದ ಕಾರ್ಯಕರ್ತರ ಮತ್ತು ಬೆಂಬಲಿಗರ ಸಭೆ ನಡೆಸಿ ’ಟಿಕೆಟ್ ನನಗೇ ಸಿಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರಲ್ಲದೇ, ಕರಡಿ ಕುಟುಂಬದ ಬಗ್ಗೆ ಅಸಮಾಧಾನ ಹೊರಹಾಕಿದ್ದರು.