ಗದಗ: 'ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಚರ್ಚೆ ಇಲ್ಲ. ರಾಷ್ಟ್ರೀಯ ನಾಯಕರು ಚರ್ಚೆ ಮಾಡಿ ಸಿಎಂ ಅಭ್ಯರ್ಥಿ ಘೋಷಣೆ ಮಾಡುತ್ತಾರೆ. ಆದರೆ, ಲಿಂಗಾಯತರು ಮುಖ್ಯಮಂತ್ರಿ ಆಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, 'ಉಜ್ವಲ ಯೋಜನೆ ಅಡಿ ಅಡುಗೆ ಅನಿಲ, ಪ್ರತಿ ಮನೆಗೆ ಶೌಚಾಲಯ, ಜನರಿಕ್ ಔಷಧಿ ಒದಗಿಸಿದ್ದು ಬಿಜೆಪಿ ಸರ್ಕಾರ. ಇದು ಜನರ ಮನಸ್ಸಿನಲ್ಲಿ ಉಳಿದಿದೆ’ ಎಂದು ಹೇಳಿದರು.