ಆರ್ಆರ್ ನಗರ ವ್ಯಾಪ್ತಿಯ ಅಪಾರ್ಟ್ಮೆಂಟ್ ನಿವಾಸಿಗಳನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶಿವಕುಮಾರ್, ‘ಆ ಕ್ಷೇತ್ರದ ಉಪ ಚುನಾವಣೆಯಲ್ಲಿ 50 ಸಾವಿರ ಮತಗಳ ಅಂತರದಿಂದ ನಾವು (ಕಾಂಗ್ರೆಸ್) ಸೋತರೆ, ವಿಧಾನಸಭೆ ಚುನಾವಣೆಯಲ್ಲಿ ಕೇವಲ 10 ಸಾವಿರ ಮತಗಳಿಂದ ಸೋತಿದ್ದೆವು. ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 25-30 ಸಾವಿರ ಮುನ್ನಡೆ ಪಡೆಯುವ ವಿಶ್ವಾಸವಿದೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದು ಜನರಿಗೆ ಅರಿವಾಗಿದೆ’ ಎಂದರು.