ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಬಿಜೆಪಿ ವರಿಷ್ಠರಿಂದ ಸುಧಾಕರ್‌ಗೆ ಮನ್ನಣೆ

Published : 25 ಮಾರ್ಚ್ 2024, 6:42 IST
Last Updated : 25 ಮಾರ್ಚ್ 2024, 6:42 IST
ಫಾಲೋ ಮಾಡಿ
Comments
ಬಹುಸಂಖ್ಯಾತ ಒಕ್ಕಲಿಗ ಸಮುದಾಯಕ್ಕೆ ಸೇರಿದ ಅಭ್ಯರ್ಥಿ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ
ಸುಧಾಕರ್ ರಾಜಕೀಯ ಹೆಜ್ಜೆ
2013 ಮತ್ತು 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು. ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ ಅವರು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದರು.   2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು.
ವಿಶ್ವಾಸಕ್ಕೆ ಪಡೆಯುವ ಸವಾಲು
ಟಿಕೆಟ್ ಪಡೆದಿರುವ ಡಾ.ಕೆ.ಸುಧಾಕರ್ ಅವರಿಗೆ ಈಗ ಪಕ್ಷದ ಎಲ್ಲ ನಾಯಕರನ್ನು ಒಟ್ಟಿಗೆ ಕೊಂಡೊಯ್ಯಬೇಕಾದ ಸವಾಲು ಇದೆ. ಅಂತರ ಕಾಯ್ದುಕೊಂಡಿದ್ದ ಎಂ.ಟಿ.ಬಿ.ನಾಗರಾಜ್ ಅವರ ಜೊತೆ ಮತ್ತೆ ಸುಧಾಕರ್ ಸ್ನೇಹ ಖುದುರಿಸಿದ್ದಾರೆ.  ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಶಾಸಕ ಎಸ್‌.ಆರ್.ವಿಶ್ವನಾಥ್ ಅವರ ಪರವಾಗಿದ್ದ ಬಾಗೇಪಲ್ಲಿಯ ಮುಖಂಡ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜು ದೊಡ್ಡಬಳ್ಳಾಪುರ ಶಾಸಕ ಧೀರಜ್ ಅವರ ವಿಶ್ವಾಸವನ್ನು ಸುಧಾಕರ್ ಪಡೆಯಬೇಕಾಗಿದೆ.
ಜೆಡಿಎಸ್ ಒಲವು
ಕ್ಷೇತ್ರದ ಜೆಡಿಎಸ್ ಮುಖಂಡರು ಸಹ ಡಾ.ಕೆ.ಸುಧಾಕರ್ ಪರವಾಗಿ ಒಲವು ಹೊಂದಿದ್ದರು. ಚುನಾವಣೆ ಘೋಷಣೆಗೂ ಮುನ್ನವೇ ಸುಧಾಕರ್ ಎಚ್‌.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.  ಇತ್ತೀಚೆಗೆ ಬೆಂಗಳೂರಿನ ಎಚ್‌.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜೆಡಿಎಸ್ ಮುಖಂಡರ ಸಭೆಯಲ್ಲಿಯೂ ಡಾ.ಕೆ.ಸುಧಾಕರ್‌ ಪರವಾಗಿ ಒಲವು ವ್ಯಕ್ತವಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT