ಚುನಾವಣೆ ಸಂದರ್ಭದಲ್ಲಿ ಹಣ ಅಕ್ರಮ ಸಾಗಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಸ್ಸೀಮತೆ ಹೊಂದಿದೆ. ತಾನು ಕಳ್ಳ, ಪರರನ್ನು ನಂಬ ಎಂಬ ಸ್ಥಿತಿ ಕಾಂಗ್ರೆಸ್ಸಿಗರದು. ಕಾಂಗ್ರೆಸ್ ಹಿಂದಿನಿಂದಲೇ ಹಣ, ಹೆಂಡ ಮತ್ತು ತೋಳ್ಬಲದ ಮೂಲಕ ಗೆಲುವು ಸಾಧಿಸುತ್ತಿತ್ತು. ಈಚಿನ ದಿನಗಳಲ್ಲಿ ಪಂಚರಾಜ್ಯಗಳ ಚುನಾವಣೆ ನಡೆದಾಗ ಕಾಂಗ್ರೆಸ್ ಮುಖಂಡರು ಗುತ್ತಿಗೆದಾರರಿಂದ ಹಣ ಸಂಗ್ರಹಿಸಿ ತೆಲಂಗಾಣ ಮತ್ತಿತರ ರಾಜ್ಯಗಳಲ್ಲಿ ಬಳಸಿಕೊಂಡಿದ್ದರು ಎಂದು ಅವರು ಆರೋಪಿಸಿದರು.