ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಶಿವಮೊಗ್ಗಕ್ಕೆ ಗೀತಾ ಭೇಟಿ; ಸ್ವಾಗತಕ್ಕೆ ಕಾಂಗ್ರೆಸ್ ಪಡೆ ಸಜ್ಜು

Published : 19 ಮಾರ್ಚ್ 2024, 16:05 IST
Last Updated : 19 ಮಾರ್ಚ್ 2024, 16:05 IST
ಫಾಲೋ ಮಾಡಿ
Comments
‘ಮೋದಿ ಹವಾ–ಗಿವಾ ಏನು ಇಲ್ಲ’
ಕಾಂಗ್ರೆಸ್ ನುಡಿದಂತೆ ನಡೆದ ಸರ್ಕಾರ. ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಾ ಬಂದಿದೆ. ಗ್ಯಾರಂಟಿಗಳ ಬಲ ನಮಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಗಳು ಸುಳ್ಳು ಎಂಬುದು ಜನರಿಗೆ ಗೊತ್ತಾಗಿದೆ. ಇದು ಸುಳ್ಳು ಮತ್ತು ಸತ್ಯದ ನಡುವಿನ ಚುನಾವಣೆಯಾಗಿದೆ ಎಂದು ಎಚ್‌.ಎಸ್.ಸುಂದರೇಶ್‌ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ನಲ್ಲಿ ಭ್ರಷ್ಟಚಾರವಿದೆ ಎನ್ನುತ್ತಾರೆ. ಆದರೆ ಸುಪ್ರೀಂ ಕೋರ್ಟ್ ಮೋದಿ ಸರ್ಕಾರಕ್ಕೆ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಕಪಾಳ ಮೋಕ್ಷ ಮಾಡಿದೆ. ಅದನ್ನು ಮರೆತ್ತಿದ್ದಾರೆ. ಎಸ್‌ಬಿಐ ಚುನವಣಾ ಬಾಂಡ್‌ ವಿವರ ಕೂಡಲೇ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ತರಾಟೆ ತೆಗೆದುಕೊಂಡಿದೆ. ಕಳ್ಳರು ಕೊಟ್ಟ ಕೋಟ್ಯಂತರ ಹಣ ಚುನಾವಣಾ ಬಾಂಡ್ ಆಗಿದೆ. ಯಾವ ನೈತಿಕತೆಯ ಮೇಲೆ ಮೋದಿ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಾರೆ. ಮೋದಿ ಹವಾ–ಗಿವಾ ಏನೂ ಇಲ್ಲ ಎಂದು ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT