<p><strong>ಪೀಣ್ಯ ದಾಸರಹಳ್ಳಿ:</strong> ‘ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. 5 ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಸಂಪೂರ್ಣ ಬರಿದು ಮಾಡಿ ಮುಂದಿನ ದಿನಗಳಲ್ಲಿ ನಿಮ್ಮನ್ನು ಸಾಲಗಾರರನ್ನಾಗಿ ಮಾಡುವುದೇ ರಾಜ್ಯ ಸರ್ಕಾರದ ಸಾಧನೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಭಾನುವಾರ ಹಮ್ಮಿಕೊಂಡಿದ್ದ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಗ್ಯಾರಂಟಿ ಕಾರ್ಯಕ್ರಮಕ್ಕಾಗಿ ರಾಜ್ಯ ಸರ್ಕಾರ ಇದುವರೆಗೂ ₹1.05 ಸಾವಿರ ಕೋಟಿ ಸಾಲ ಮಾಡಿದೆ. ಈ ಸಾಲವನ್ನು ತೀರಿಸುವವರು ಯಾರು ? ಅದನ್ನು ನೀವೇ (ಜನರು) ತೀರಿಸಬೇಕಾಗುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ತೀರ್ಮಾನ ಮಾಡಿ ಮತ ಚಲಾಯಿಸಿ’ ಎಂದು ಕೋರಿದರು.</p>.<p>ಸಂಸದ ಡಿ.ವಿ. ಸದಾನಂದ ಗೌಡ, ‘ಕಳೆದ ಹಲವು ಲೋಕಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇವೆ. ಈ ಬಾರಿಯೂ ದೇಶದಾದ್ಯಂತ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಶೋಭಾ ಕರಂದ್ಲಾಜೆ ಅವರು ವಿಜಯಶಾಲಿ ಆಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಶೋಭಾ ಕರಂದ್ಲಾಜೆ ಮಾತನಾಡಿ, ‘ಎಚ್.ಡಿ. ದೇವೇಗೌಡ ಅವರು ದೇಶದ ಭದ್ರತೆಗಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮೈತ್ರಿಕೂಟದ ಕಾರ್ಯಕರ್ತರು, ‘ಮತ್ತೊಮ್ಮೆ ದೇಶಕ್ಕೆ ಮೋದಿ’ ಎಂಬ ಸಂದೇಶವನ್ನು ಮನೆ ಮನೆಗೆ ತಲುಪಿಸುತ್ತಿದ್ದಾರೆ. ಈ ಬಾರಿಯೂ ಹೆಚ್ಚಿನ ಮತಗಳ ಗೆಲುವು ನಮ್ಮದಾಗಲಿದೆ’ ಎಂದರು</p>.<p>ಶಾಸಕ ಎಸ್. ಮುನಿರಾಜು, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಅಂದಾನಪ್ಪ, ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಎಂ. ಮುನಿಸ್ವಾಮಿ, ಮಂಡಲ ಅಧ್ಯಕ್ಷ ಸೋಮಶೇಖರ್, ಬಾಗಲಗುಂಟೆ ವಾರ್ಡ್ ಜೆಡಿಎಸ್ ಅಧ್ಯಕ್ಷ ಹನುಮಂತ ರಾಯಪ್ಪ ಹಾಜರಿದ್ದರು.</p>.<p>ದಾಸರಹಳ್ಳಿ, ಚೊಕ್ಕಸಂದ್ರ, ಪೀಣ್ಯ 2ನೇ ಹಂತ, ಹೆಗ್ಗನಹಳ್ಳಿ ಸುಂಕದಕಟ್ಟೆವರೆಗೂ ರೋಡ್ ಶೋ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. 5 ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಸಂಪೂರ್ಣ ಬರಿದು ಮಾಡಿ ಮುಂದಿನ ದಿನಗಳಲ್ಲಿ ನಿಮ್ಮನ್ನು ಸಾಲಗಾರರನ್ನಾಗಿ ಮಾಡುವುದೇ ರಾಜ್ಯ ಸರ್ಕಾರದ ಸಾಧನೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಭಾನುವಾರ ಹಮ್ಮಿಕೊಂಡಿದ್ದ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಗ್ಯಾರಂಟಿ ಕಾರ್ಯಕ್ರಮಕ್ಕಾಗಿ ರಾಜ್ಯ ಸರ್ಕಾರ ಇದುವರೆಗೂ ₹1.05 ಸಾವಿರ ಕೋಟಿ ಸಾಲ ಮಾಡಿದೆ. ಈ ಸಾಲವನ್ನು ತೀರಿಸುವವರು ಯಾರು ? ಅದನ್ನು ನೀವೇ (ಜನರು) ತೀರಿಸಬೇಕಾಗುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ತೀರ್ಮಾನ ಮಾಡಿ ಮತ ಚಲಾಯಿಸಿ’ ಎಂದು ಕೋರಿದರು.</p>.<p>ಸಂಸದ ಡಿ.ವಿ. ಸದಾನಂದ ಗೌಡ, ‘ಕಳೆದ ಹಲವು ಲೋಕಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇವೆ. ಈ ಬಾರಿಯೂ ದೇಶದಾದ್ಯಂತ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಶೋಭಾ ಕರಂದ್ಲಾಜೆ ಅವರು ವಿಜಯಶಾಲಿ ಆಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಶೋಭಾ ಕರಂದ್ಲಾಜೆ ಮಾತನಾಡಿ, ‘ಎಚ್.ಡಿ. ದೇವೇಗೌಡ ಅವರು ದೇಶದ ಭದ್ರತೆಗಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮೈತ್ರಿಕೂಟದ ಕಾರ್ಯಕರ್ತರು, ‘ಮತ್ತೊಮ್ಮೆ ದೇಶಕ್ಕೆ ಮೋದಿ’ ಎಂಬ ಸಂದೇಶವನ್ನು ಮನೆ ಮನೆಗೆ ತಲುಪಿಸುತ್ತಿದ್ದಾರೆ. ಈ ಬಾರಿಯೂ ಹೆಚ್ಚಿನ ಮತಗಳ ಗೆಲುವು ನಮ್ಮದಾಗಲಿದೆ’ ಎಂದರು</p>.<p>ಶಾಸಕ ಎಸ್. ಮುನಿರಾಜು, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಅಂದಾನಪ್ಪ, ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಎಂ. ಮುನಿಸ್ವಾಮಿ, ಮಂಡಲ ಅಧ್ಯಕ್ಷ ಸೋಮಶೇಖರ್, ಬಾಗಲಗುಂಟೆ ವಾರ್ಡ್ ಜೆಡಿಎಸ್ ಅಧ್ಯಕ್ಷ ಹನುಮಂತ ರಾಯಪ್ಪ ಹಾಜರಿದ್ದರು.</p>.<p>ದಾಸರಹಳ್ಳಿ, ಚೊಕ್ಕಸಂದ್ರ, ಪೀಣ್ಯ 2ನೇ ಹಂತ, ಹೆಗ್ಗನಹಳ್ಳಿ ಸುಂಕದಕಟ್ಟೆವರೆಗೂ ರೋಡ್ ಶೋ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>