ಚೆಲುವರಾಯ ಸ್ವಾಮಿ ಅವರು ಆರೋಗ್ಯ ಸಚಿವರಾಗಿದ್ದಾಗ ಮಂಡ್ಯಕ್ಕೆ ವೈದ್ಯಕೀಯ ಕಾಲೇಜು ತಂದರು ಎಂದ ಮರಿತಿಬ್ಬೇಗೌಡ, ಕಳೆದ ಚುನಾವಣೆಯಲ್ಲಿ ಜನತಾ ದಳದವರು ನನಗೆ ಟಿಕೆಟ್ ನೀಡಿ, ಬೆಂಬಲವನ್ನೇ ಕೊಡಲಿಲ್ಲ ಎಂದು ಕಿಡಿಕಾರಿದರು.
ಪಕ್ಷದ ಸಭೆಗಳಲ್ಲಿ ಕುಟುಂಬದ ಪರವಾಗಿ ಮಾತ್ರವೇ ತೀರ್ಮಾನ ತೆಗೆದುಕೊಳ್ಳಲಾಗುತ್ತಿತ್ತು ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಎಂಎಲ್ಸಿ, ಇದರ ವಿರುದ್ಧ ಅನೇಕ ಸಲ ದನಿ ಎತ್ತಿರುವುದಾಗಿಯೂ ಹೇಳಿದರು. ಹಾಗೆಯೇ, ಜೆಡಿಎಸ್ ಪಕ್ಷ ರೈತ ವಿರೋಧಿ ಕಾಯ್ದೆಗಳನ್ನು ಬೆಂಬಲಿಸಿದಾಗಲೂ ವಿರೋಧ ವ್ಯಕ್ತಪಡಿಸಿದ್ದೆ ಎಂದು ತಿಳಿಸಿದರು.
ಕಳೆದ 4 ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದೆ. ಮೊದಲನೇ ಸಲ ಡಿ.ಕೆ. ಶಿವಕುಮಾರ್ ಅವರ ಆಶೀರ್ವಾದದಿಂದ ಟಿಕೆಟ್ ಸಿಕ್ಕಿತ್ತು. 1985ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜೆಡಿಎಸ್ ಸೇರಿದ್ದೆ. ಆ ಪಕ್ಷದಲ್ಲಿ ಇಂದು ಜಾತ್ಯತೀತ ತತ್ವಗಳಿಗೆ ಧಕ್ಕೆ ಆಗಿರುವ ಕಾರಣ, ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಗೆ ಸಂಪೂರ್ಣವಾಗಿ ಬೆಂಬಲ ನೀಡಲಿದ್ದೇನೆ ಎಂದು ಸ್ಪಷ್ಟಪಡಿಸಿದರು.