‘ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲುವ ತಯಾರಿಗಾಗಿ 10–15 ಜನ ಸಚಿವರನ್ನು ಅಭ್ಯರ್ಥಿಗಳನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದರು. ಆದರೆ, ಯಾವ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಆಗಲು ತಯಾರಾಗಲಿಲ್ಲ. ಮೋದಿಯವರ ಜನಪ್ರಿಯತೆ ಕಾರಣಕ್ಕಾಗಿ ತಾವು ಚುನಾವಣೆಯಲ್ಲಿ ಗೆಲ್ಲದೇ ಹೋದರೆ ಮತ್ತು ಜನರಿಂದ ತಿರಸ್ಕೃತರಾದರೆ ಎಂಬ ಭಯದಿಂದ ಸ್ಪರ್ಧಿಸಲು ತಯಾರಾಗಲಿಲ್ಲ’ ಎಂದರು.