‘ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಇನ್ನೂ ಒಂಬತ್ತು ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲಿದೆ. ಕುಮಾರಸ್ವಾಮಿ ಅವರು ಏನಾದರೂ ಕೆಲಸ ಮಾಡಿದ್ದರೆ, ಇಲ್ಲೇ ಚುನಾವಣೆಗೆ ಸ್ಪರ್ಧಿಸುತ್ತಿದ್ದರು. ಆದರೆ, ಅವರಿಗೆ ವಿಶ್ವಾಸವಿಲ್ಲ. ಹೊಸದಾಗಿ ಜನರನ್ನು ಮರಳು ಮಾಡುವುದಕ್ಕೆ ಮಂಡ್ಯಕ್ಕೆ ಹೋಗಿದ್ದಾರೆ. ದೇವೇಗೌಡರು, ಅನಿತಾ ಕುಮಾರಸ್ವಾಮಿ ಎಲ್ಲರೂ ಇಲ್ಲಿ ಅಧಿಕಾರ ಅನುಭವಿಸಿ ಏನೂ ಮಾಡಲಿಲ್ಲ. ಈಗ ಮನೆ ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಅವರದ್ದೇನಿದ್ದರೂ ಸ್ವಾರ್ಥದ ರಾಜಕಾರಣ’ ಎಂದು ಟೀಕಿಸಿದರು.