ಸಚಿವರು, ಶಾಸಕರಿಗೂ ಇದೆ ಜವಾಬ್ದಾರಿ ‘ಬಲ’ವನ್ನು ಮತವಾಗಿಸಿಕೊಳ್ಳಲು ಪ್ರಯತ್ನ ಸಿಎಂ ವಿರುದ್ಧ ತೊಡೆ ತಟ್ಟಿರುವ ಜಿಟಿಡಿ, ವಿಶ್ವನಾಥ್!
ನಮ್ಮವರೇ ಮುಖ್ಯಮಂತ್ರಿ ಆಗಿದ್ದಾರೆ. ಅವರು ನೀಡಿರುವ ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದ್ದೇವೆ. ಅವರೂ ಗಂಭೀರವಾಗಿಯೇ ಪರಿಗಣಿಸಿದ್ದಾರೆ
ಬಿ.ಜೆ. ವಿಜಯ್ಕುಮಾರ್ ಅಧ್ಯಕ್ಷ ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕ
ಮುಖಭಂಗ ಮಾಡಲೆಂದೇ...!
ಕಾರ್ಯತಂತ್ರದ ಭಾಗವಾಗಿಯೇ ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದ ಲಕ್ಷ್ಮಣ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. 47 ವರ್ಷಗಳ ಬಳಿಕ ಈ ಸಮಾಜದ ನಾಯಕನಿಗೆ ಟಿಕೆಟ್ ಸಿಕ್ಕಿದೆ. ಇದನ್ನು ಮುಂದು ಮಾಡಿ ‘ಒಕ್ಕಲಿಗಾಸ್ತ್ರ’ವನ್ನು ಬಳಸಿ ಮತ ಬೇಟೆಗೆ ಇಳಿದಿದ್ದಾರೆ. ಮುಖ್ಯಮಂತ್ರಿಗೆ ಮುಖಭಂಗ ಮಾಡಬೇಕು ಎಂಬ ದೃಷ್ಟಿಯಿಂದಲೇ ಬಿಜೆಪಿ–ಜೆಡಿಎಸ್ನವರು ಒಗ್ಗೂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಹೋದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಇದ್ದಾಗಲೂ ತಮ್ಮ ಪಕ್ಷದ (ಕಾಂಗ್ರೆಸ್) ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಸಿದ್ದರಾಮಯ್ಯ ಅವರಿಗೆ ಸಾಧ್ಯವಾಗಿರಲಿಲ್ಲ. ಈ ಬಾರಿ ಬಿಜೆಪಿ–ಜೆಡಿಎಸ್ ಒಂದಾಗಿದೆ. ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹಾಗೂ ಇತ್ತೀಚಿನ ವರ್ಷಗಳಲ್ಲಿ ಜೊತೆಗೇ ಗುರುಸಿಕೊಂಡಿದ್ದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ವಿರುದ್ಧ ತಿರುಗಿಬಿದ್ದು ತೊಡೆ ತಟ್ಟಿರುವುದು ಮುಖ್ಯಮಂತ್ರಿಗೆ ಸವಾಲು ಹೆಚ್ಚಾಗುವಂತೆ ಮಾಡಿದೆ! ಚಾಮುಂಡೇಶ್ವರಿ ಪಿರಿಯಾಪಟ್ಟಣ ಹಾಗೂ ಹುಣಸೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾಬಲ್ಯ ಹೊಂದಿರುವ ಒಕ್ಕಲಿಗ ಮತದಾರರ ಮನವೊಲಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.