ಏ.29ರಿಂದ 2 ದಿನ ಕನ್ನಡ ಚಲನಚಿತ್ರರಂಗದ ಹಲವು ನಟ–ನಟಿಯರು ಪ್ರಚಾರದಲ್ಲಿ ಪಾಲ್ಗೊಳ್ಳಲು ಸ್ವಯಂ ಪ್ರೇರಿತರಾಗಿ ಬರುತ್ತಿದ್ದಾರೆ. ನಟ ದುನಿಯಾ ವಿಜಯ್, ಡಾಲಿ ಧನಂಜಯ್, ಧ್ರುವ ಸರ್ಜಾ, ವಿಜಯ ರಾಘವೇಂದ್ರ, ‘ನೆನಪಿರಲಿ’ ಪ್ರೇಮ್, ಚಿಕ್ಕಣ್ಣ, ಚಂದನ್ ಶೆಟ್ಟಿ, ಅತುಲ್, ನಿಶ್ಚಿಕಾ ನಾಯ್ಡು ಪ್ರಚಾರ ಮಾಡಲಿದ್ದಾರೆ. ಭದ್ರಾವತಿ, ಬೈಂದೂರು ಸೇರಿದಂತೆ ಹಲವೆಡೆ ರೋಡ್ ಶೋ ನಡೆಸಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.