ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video |ಸ್ವತಂತ್ರ ಅಭ್ಯರ್ಥಿಯಾಗಿ ಮತ್ತೆ ಸುಮಲತಾ ಅಂಬರೀಶ್ ಕಣಕ್ಕೆ ?

Published 30 ಮಾರ್ಚ್ 2024, 14:48 IST
Last Updated 30 ಮಾರ್ಚ್ 2024, 14:48 IST
ಅಕ್ಷರ ಗಾತ್ರ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ್ದು, ಅಭಿಮಾನಿಗಳ ಒತ್ತಡಕ್ಕೆ ಮಣಿದು ಮಹತ್ವದ ಘೋಷಣೆ ಮಾಡಿದ್ದಾರೆ. ಕಾರ್ಯಕರ್ತರು, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಸುಮಲತಾ, ನನ್ನ ಹಾಗೂ ಅಂಬರೀಶ್ ಅಭಿಮಾನಿಗಳಿಗೆ 5 ವರ್ಷದ ರಾಜಕೀಯ ಜೀವನ ನೀಡಿದ್ದು ಮಂಡ್ಯದ ಜನ. ಇಂದು ನನ್ನ ಜೊತೆಯಲ್ಲಿ ಹಾಗೂ ಅಂಬರೀಶ್ ಅವರ ರಾಜಕೀಯ ಜೀವನದಲ್ಲಿದ್ದ ಎಲ್ಲಾ ಅಭಿಮಾನಿಗಳು ಧನ್ಯವಾದ. ನನಗೆ ರಾಜಕೀಯ ಅನುಭವ ಇಲ್ಲದ ಸಂದರ್ಭದಲ್ಲಿ ನನ್ನ ಜೊತೆ ಇದ್ದೀರಿ. 5 ವರ್ಷದಲ್ಲಿ ಕಣ್ಣೀರು ಹಾಕಿದ ದಿನಗಳು ಇದೆ. ನಾನು ಸ್ವಾರ್ಥದಿಂದ ನನ್ನ ಹೆಜ್ಜೆ ಹಾಕಿಕೊಳ್ಳಬಹುದಿತ್ತು. ಆದರೆ ನಾನು ನಿಮಗೆ ಕೊಟ್ಟಿರುವ ವಾಗ್ದಾನ ಮೀರಿಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಅಲ್ಲದೆ ಏಪ್ರಿಲ್ 3 ರಂದು ಮಂಡ್ಯದಲ್ಲಿ ಸಭೆ ನಡೆಸಿ ಅಲ್ಲಿಯೇ ನಾನು ನಿರ್ಧಾರ ತಿಳಿಸುತ್ತೇನೆ ಎಂದರು. ಈ ಮೂಲಕ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯಬಹುದು ಎನ್ನುವ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT