ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕಾಂಗ್ರೆಸ್ ಪೋಸ್ಟ್ ಹಂಚಿಕೊಂಡು,‘ ಜೆಡಿಎಸ್ ಪಕ್ಷದ ಕೇಂದ್ರ ಹೆಡ್ ಆಫೀಸ್ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸದುಡುಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ ಕರ್ನಾಟಕ ಚುನಾವಣಾ ಆಯೋಗವು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಎಂದು ಪ್ರಶ್ನಿಸಿದೆ.