<p><strong>ಚಿಕ್ಕಬಳ್ಳಾಪುರ:</strong> ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಾ ಕಣಕ್ಕಿಳಿದು ತೊಡೆ ತಟ್ಟಿದ 29 ಅಭ್ಯರ್ಥಿಗಳ ಪೈಕಿ 27 ಹುರಿಯಾಳುಗಳಿಗೆ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಸೋತವರ ಪೈಕಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಮಾತ್ರ ಠೇವಣಿ ಉಳಿದಿದೆ.</p>.<p>ಈ ಚುನಾವಣೆಗೆ 32 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು. ಈ ಪೈಕಿ ಮೂವರು ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದರು. ಅಂತಿಮವಾಗಿ ಸ್ಪರ್ಧಾ ಕಣದಲ್ಲಿ 29 ಅಭ್ಯರ್ಥಿಗಳು ಉಳಿದಿದ್ದರು. </p>.<p>ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಈ ಮೂಲಕ 2024 ರ ಲೋಕಸಭೆ ಚುನಾವಣೆ ಹೊಸ ದಾಖಲೆ ಸೃಷ್ಟಿಸಿತು. ಎರಡು ಬ್ಯಾಲೆಟ್ಗಳನ್ನು ಈ ಬಾರಿ ಬಳಸಲಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ 15 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು.</p>.<p><strong>ಏನಿದು ಠೇವಣಿ ನಷ್ಟ:</strong> </p><p>ಚುನಾವಣೆಗಳಲ್ಲಿ ಪಕ್ಷೇತರರ ಅಭ್ಯರ್ಥಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಠೇವಣಿ ಪದ್ಧತಿ ಜಾರಿಗೆ ತಂದಿದೆ. ಅದರಂತೆ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳು ₹12,5000 ಮತ್ತು ಇತರೆ ವರ್ಗದವರು ₹25 ಸಾವಿರ ಠೇವಣಿ ಮೊತ್ತವನ್ನು ನಾಮಪತ್ರದೊಂದಿಗೆ ಚುನಾವಣಾಧಿಕಾರಿ ಅವರಿಗೆ ಸಲ್ಲಿಸಿದ್ದರು.</p>.<p>ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪೈಕಿ ಕ್ಷೇತ್ರದಲ್ಲಿ ಒಟ್ಟು ಚಲಾವಣೆಯಾದ ಮತಗಳ ಆರನೇಯ ಒಂದು ಭಾಗ ಮತ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಠೇವಣಿ ಮೊತ್ತ ಹಿಂದಿರುಗಿಸಲಾಗುತ್ತದೆ. ಅದಕ್ಕಿಂತ ಕಡಿಮೆ ಮತ ಪಡೆದವರ ಠೇವಣಿ ಮೊತ್ತವನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿಕೊಳ್ಳುತ್ತದೆ.</p>.<p>ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (8,22,619 ಮತಗಳು) ಮತ್ತು ಪರಾಭವಗೊಂಡ ರಕ್ಷಾ ರಾಮಯ್ಯ (6,59,159 ಮತಗಳು) ಅವರನ್ನು ಹೊರತುಪಡಿಸಿದಂತೆ ಉಳಿದ ಯಾವ ಅಭ್ಯರ್ಥಿಗಳಿಗೂ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.</p>.<p>ಬಿಎಸ್ಪಿಯ ಮಹದೇವ್ ಪಿ., ಸಿಪಿಎಂನ ಮುನಿವೆಂಕಟಪ್ಪ ಎಂ.ಪಿ. ಅವರು ಸಹ ಠೇವಣಿ ಕಳೆದುಕೊಂಡಿದ್ದಾರೆ. </p>.<p>ಕಣದಲ್ಲಿ ಇರುವ ಯಾವುದೇ ಅಭ್ಯರ್ಥಿಗೆ ಮತವನ್ನು ನೀಡಲು ಮತದಾರರು ಇಚ್ಛಿಸದಿದ್ದಲ್ಲಿ ನೋಟಾಕ್ಕೆ ಮತವನ್ನು ಚಲಾಯಿಸಬಹುದು. ಹೀಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ 6,596 ನೋಟಾ ಮತಗಳು ಚಲಾವಣೆ ಆಗಿವೆ. </p>.<p>ಕಣದಲ್ಲಿ ಒಟ್ಟು 29 ಅಭ್ಯರ್ಥಿಗಳು ಇದ್ದು ಈ ಪೈಕಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯನ್ನು ಹೊರತುಪಡಿಸಿದರೆ ಅತಿ ಹೆಚ್ಚು ಮತಗಳು ಬಿದ್ದಿರುವುದು ನೋಟಾಕ್ಕೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಾ ಕಣಕ್ಕಿಳಿದು ತೊಡೆ ತಟ್ಟಿದ 29 ಅಭ್ಯರ್ಥಿಗಳ ಪೈಕಿ 27 ಹುರಿಯಾಳುಗಳಿಗೆ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಸೋತವರ ಪೈಕಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಮಾತ್ರ ಠೇವಣಿ ಉಳಿದಿದೆ.</p>.<p>ಈ ಚುನಾವಣೆಗೆ 32 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು. ಈ ಪೈಕಿ ಮೂವರು ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದರು. ಅಂತಿಮವಾಗಿ ಸ್ಪರ್ಧಾ ಕಣದಲ್ಲಿ 29 ಅಭ್ಯರ್ಥಿಗಳು ಉಳಿದಿದ್ದರು. </p>.<p>ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಈ ಮೂಲಕ 2024 ರ ಲೋಕಸಭೆ ಚುನಾವಣೆ ಹೊಸ ದಾಖಲೆ ಸೃಷ್ಟಿಸಿತು. ಎರಡು ಬ್ಯಾಲೆಟ್ಗಳನ್ನು ಈ ಬಾರಿ ಬಳಸಲಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ 15 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು.</p>.<p><strong>ಏನಿದು ಠೇವಣಿ ನಷ್ಟ:</strong> </p><p>ಚುನಾವಣೆಗಳಲ್ಲಿ ಪಕ್ಷೇತರರ ಅಭ್ಯರ್ಥಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಠೇವಣಿ ಪದ್ಧತಿ ಜಾರಿಗೆ ತಂದಿದೆ. ಅದರಂತೆ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳು ₹12,5000 ಮತ್ತು ಇತರೆ ವರ್ಗದವರು ₹25 ಸಾವಿರ ಠೇವಣಿ ಮೊತ್ತವನ್ನು ನಾಮಪತ್ರದೊಂದಿಗೆ ಚುನಾವಣಾಧಿಕಾರಿ ಅವರಿಗೆ ಸಲ್ಲಿಸಿದ್ದರು.</p>.<p>ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪೈಕಿ ಕ್ಷೇತ್ರದಲ್ಲಿ ಒಟ್ಟು ಚಲಾವಣೆಯಾದ ಮತಗಳ ಆರನೇಯ ಒಂದು ಭಾಗ ಮತ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಠೇವಣಿ ಮೊತ್ತ ಹಿಂದಿರುಗಿಸಲಾಗುತ್ತದೆ. ಅದಕ್ಕಿಂತ ಕಡಿಮೆ ಮತ ಪಡೆದವರ ಠೇವಣಿ ಮೊತ್ತವನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿಕೊಳ್ಳುತ್ತದೆ.</p>.<p>ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (8,22,619 ಮತಗಳು) ಮತ್ತು ಪರಾಭವಗೊಂಡ ರಕ್ಷಾ ರಾಮಯ್ಯ (6,59,159 ಮತಗಳು) ಅವರನ್ನು ಹೊರತುಪಡಿಸಿದಂತೆ ಉಳಿದ ಯಾವ ಅಭ್ಯರ್ಥಿಗಳಿಗೂ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.</p>.<p>ಬಿಎಸ್ಪಿಯ ಮಹದೇವ್ ಪಿ., ಸಿಪಿಎಂನ ಮುನಿವೆಂಕಟಪ್ಪ ಎಂ.ಪಿ. ಅವರು ಸಹ ಠೇವಣಿ ಕಳೆದುಕೊಂಡಿದ್ದಾರೆ. </p>.<p>ಕಣದಲ್ಲಿ ಇರುವ ಯಾವುದೇ ಅಭ್ಯರ್ಥಿಗೆ ಮತವನ್ನು ನೀಡಲು ಮತದಾರರು ಇಚ್ಛಿಸದಿದ್ದಲ್ಲಿ ನೋಟಾಕ್ಕೆ ಮತವನ್ನು ಚಲಾಯಿಸಬಹುದು. ಹೀಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ 6,596 ನೋಟಾ ಮತಗಳು ಚಲಾವಣೆ ಆಗಿವೆ. </p>.<p>ಕಣದಲ್ಲಿ ಒಟ್ಟು 29 ಅಭ್ಯರ್ಥಿಗಳು ಇದ್ದು ಈ ಪೈಕಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯನ್ನು ಹೊರತುಪಡಿಸಿದರೆ ಅತಿ ಹೆಚ್ಚು ಮತಗಳು ಬಿದ್ದಿರುವುದು ನೋಟಾಕ್ಕೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>