<p><strong>ನವದೆಹಲಿ:</strong> ಚಿತ್ರದುರ್ಗ (ಮೀಸಲು) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸುವ ಸಂಭವವಿದೆ. ಕ್ಷೇತ್ರದ ಸಂಸದರಾಗಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲು ವರಿಷ್ಠರಿಗೆ ಒಲವಿಲ್ಲ. </p>.<p>ಕ್ಷೇತ್ರದಲ್ಲಿ ನಾರಾಯಣಸ್ವಾಮಿ ಅವರಿಗೆ ಆಡಳಿತ ವಿರೋಧಿ ಅಲೆ ತೀವ್ರವಾಗಿದೆ. ಕ್ಷೇತ್ರದಲ್ಲಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಮಲ ಪಾಳಯ ಯೋಜಿಸಿತ್ತು. ಈ ಸಂಬಂಧ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಸಂಪರ್ಕಿಸಿತ್ತು. ಆದರೆ, ಅವರು ಚುನಾವಣಾ ರಾಜಕಾರಣಕ್ಕೆ ಬರಲು ನಿರಾಕರಿಸಿದ್ದರು.</p>.<p>ಪಕ್ಷದ ಪರವಾಗಿ ರಾಜ್ಯದಾದ್ಯಂತ ಚುನಾವಣಾ ಪ್ರಚಾರದಲ್ಲಿ ತೊಡಗುವಂತೆ ನಾರಾಯಣಸ್ವಾಮಿ ಅವರಿಗೆ ಸೂಚಿಸಲಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಆನೇಕಲ್ ಕ್ಷೇತ್ರದ ಟಿಕೆಟ್ ನೀಡುವುದಾಗಿ ವರಿಷ್ಠರು ವಾಗ್ದಾನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಬಾಗಲಕೋಟೆ ಜಿಲ್ಲೆಯವರಾದ ಕಾರಜೋಳ, ಪರಿಶಿಷ್ಟ ಜಾತಿಯ ಎಡಗೈ ಪಂಗಡಕ್ಕೆ ಸೇರಿದವರು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋತಿದ್ದರು. ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗಿದ್ದರು. </p>.<p>ಚಿತ್ರದುರ್ಗ ಕ್ಷೇತ್ರಕ್ಕೆ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಚಿತ್ರದುರ್ಗ, ಉತ್ತರ ಕನ್ನಡ, ರಾಯಚೂರು, ಬೆಳಗಾವಿ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಈವರೆಗೆ ಪ್ರಕಟಿಸಿಲ್ಲ. ಒಂದೆರಡು ದಿನಗಳಲ್ಲಿ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚಿತ್ರದುರ್ಗ (ಮೀಸಲು) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸುವ ಸಂಭವವಿದೆ. ಕ್ಷೇತ್ರದ ಸಂಸದರಾಗಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲು ವರಿಷ್ಠರಿಗೆ ಒಲವಿಲ್ಲ. </p>.<p>ಕ್ಷೇತ್ರದಲ್ಲಿ ನಾರಾಯಣಸ್ವಾಮಿ ಅವರಿಗೆ ಆಡಳಿತ ವಿರೋಧಿ ಅಲೆ ತೀವ್ರವಾಗಿದೆ. ಕ್ಷೇತ್ರದಲ್ಲಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಮಲ ಪಾಳಯ ಯೋಜಿಸಿತ್ತು. ಈ ಸಂಬಂಧ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಸಂಪರ್ಕಿಸಿತ್ತು. ಆದರೆ, ಅವರು ಚುನಾವಣಾ ರಾಜಕಾರಣಕ್ಕೆ ಬರಲು ನಿರಾಕರಿಸಿದ್ದರು.</p>.<p>ಪಕ್ಷದ ಪರವಾಗಿ ರಾಜ್ಯದಾದ್ಯಂತ ಚುನಾವಣಾ ಪ್ರಚಾರದಲ್ಲಿ ತೊಡಗುವಂತೆ ನಾರಾಯಣಸ್ವಾಮಿ ಅವರಿಗೆ ಸೂಚಿಸಲಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಆನೇಕಲ್ ಕ್ಷೇತ್ರದ ಟಿಕೆಟ್ ನೀಡುವುದಾಗಿ ವರಿಷ್ಠರು ವಾಗ್ದಾನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಬಾಗಲಕೋಟೆ ಜಿಲ್ಲೆಯವರಾದ ಕಾರಜೋಳ, ಪರಿಶಿಷ್ಟ ಜಾತಿಯ ಎಡಗೈ ಪಂಗಡಕ್ಕೆ ಸೇರಿದವರು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋತಿದ್ದರು. ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗಿದ್ದರು. </p>.<p>ಚಿತ್ರದುರ್ಗ ಕ್ಷೇತ್ರಕ್ಕೆ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಚಿತ್ರದುರ್ಗ, ಉತ್ತರ ಕನ್ನಡ, ರಾಯಚೂರು, ಬೆಳಗಾವಿ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಈವರೆಗೆ ಪ್ರಕಟಿಸಿಲ್ಲ. ಒಂದೆರಡು ದಿನಗಳಲ್ಲಿ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>