ನಗರದಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಕಳಸಾ–ಬಂಡೂರಿ ನಾಲಾ ಜಾರಿ ಆಗದಿರುವುದಕ್ಕೆ ಕೇಂದ್ರವೇ ಕಾರಣ. ಟೆಂಡರ್ ಕರೆದಿದ್ದರೂ, ಪರಿಸರ ಇಲಾಖೆ ಅನುಮತಿ ಕೊಟ್ಟಿಲ್ಲ. ಇದರ ಬಗ್ಗೆ ಯಾವತ್ತಾದರೂ ಗದ್ದಿಗೌಡರ ಮಾತನಾಡಿದ್ದಾರೆಯೇ’ ಎಂದು ಪ್ರಶ್ನಿಸಿದರು.