ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ಅಪೇಕ್ಷೆಯಂತೆ ಉಚ್ಚಾಟನೆ; ಇದರಲ್ಲಿ ನಮ್ಮ ಪಾತ್ರವಿಲ್ಲ: ಯಡಿಯೂರಪ್ಪ

Published 23 ಏಪ್ರಿಲ್ 2024, 8:29 IST
Last Updated 23 ಏಪ್ರಿಲ್ 2024, 8:29 IST
ಅಕ್ಷರ ಗಾತ್ರ

Election Express | ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಕ್ರಮ‌ ಜರುಗಿಸಿದೆ. ಇದರಲ್ಲಿ ನಮ್ಮ ಪಾತ್ರವೇನೂ ಇಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.ಶಿಕಾರಿಪುರದಲ್ಲಿ ಮಾತನಾಡಿ, 'ಈಶ್ವರಪ್ಪನವರು ಅಪೇಕ್ಷೆ ಪಟ್ಟಂತೆ ಉಚ್ಚಾಟನೆ ಆಗಿದೆ. ಅದರಲ್ಲಿ ನಮ್ಮ ಪಾತ್ರ ಏನೂ ಇಲ್ಲ' ಎಂದು ಸ್ಪಷ್ಟಪಡಿಸಿದರು.ಬಿಜೆಪಿಗೆ ರಾಜ್ಯದಲ್ಲಿ ಪೂರಕ ವಾತಾವರಣವಿದೆ. 28 ಸ್ಥಾನಗಳನ್ನು ಗೆಲ್ಲಲಿದ್ದೇವೆ. ನರೇಂದ್ರ ಮೋದಿ ಪರ ಅಲೆ ನೆರವಿನಿಂದ ಬಿಜೆಪಿಗೆ ಹೆಚ್ಚು ಸ್ಥಾನ ಪಡೆಯಲಿದ್ದೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT